ಚೆನ್ನೈ(ಡಿ.05): ತಮಿಳುನಾಡು ಸಿಎಂ ಜಯಲಲಿತಾ ಇನ್ನಿಲ್ಲ. 73 ದಿನಗಳಿಂದ ಚೆನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಯಲಲಿತಾ ಇಂದು ಸಂಜೆ ನಿಧನರಾಗಿದ್ದಾರೆ ಎಂದು ತಮಿಳುನಾಡಿನ 2 ಸುದ್ಧಿವಾಹಿನಿಗಳು ವರದಿ ಮಾಡಿವೆ. ಈ ಕುರಿತಂತೆ ಅಧಿಕೃತ ಘೋಷಣೆ ಬಾಕಿ

ಚೆನ್ನೈ(ಡಿ.05): ತಮಿಳುನಾಡು ಸಿಎಂ ಜಯಲಲಿತಾ ಇನ್ನಿಲ್ಲ. 73 ದಿನಗಳಿಂದ ಚೆನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಯಲಲಿತಾ ಇಂದು ಸಂಜೆ ನಿಧನರಾಗಿದ್ದಾರೆ ಎಂದು ತಮಿಳುನಾಡಿನ 2 ಸುದ್ಧಿವಾಹಿನಿಗಳು ವರದಿ ಮಾಡಿವೆ. ಈ ಬಗ್ಗೇ ಇನ್ನೂ ಅಧಿಕೃತ ಘೋಷಣೆ ಬಾಕಿ ಇದೆ. ನಿನ್ನೆ ಹೃದಯಾಘಾತಕ್ಕೆ ಒಳಗಾಗಿದ್ದ ಜಯಲಲಿತಾ ಅವರನ್ನ ಬದುಕಿಸಲು ನಿನ್ನೆಯಿಂದ ವೈದ್ಯರು ನಡೆಸಿ ಅವಿರತ ಪ್ರಯತ್ನ ಫಲ ನೀಡಲಿಲ್ಲ.

Add Asianetnews Kannada as a Preferred SourcegooglePreferred

73 ದಿನಗಳ ಹಿಂದೆ ಸೆಪ್ಸಿಸ್ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಜಯಲಲಿತಾ ಸತತ ಚಿಕಿತ್ಸೆ ಬಳಿಕ ಚೇತರಿಸಿಕೊಂಡರೂ ಎನ್ನುವಷ್ಟರಲ್ಲಿ ನಿನ್ನೆ ಸಂಜೆ ಹೃದಯಾಘಾತಕ್ಕೆ ಒಳಗಾಗಿದ್ದರು. ಹೈಪ್ರೋಟೀನ್ ಡಯಟ್`ನಿಂದ ಪೊಟಾಶಿಯಂ ಹೆಚ್ಚಾಗಿ ಜಯಲಲಿತಾಗೆ ಹೃದಯಾಘಾತ ಸಂಭವಿಸಿತ್ತು. ನಿನ್ನೆ ಸಂಜೆಯಿಂದ ಜಯಲಲಿತಾಗೆ ಎಕ್ಮೋ ಚಿಕಿತ್ಸೆ ನೀಡಲಾಗುತ್ತಿತ್ತು.

ಜಯಲಲಿತಾ ನಿಧನದ ಹಿನ್ನೆಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವೆಡೆ ತೀವ್ರ ಪೊಲೀಸ್ ಕಟ್ಟೆಚ್ಚರವಹಿಸಲಾಗಿದೆ.