ಆಸ್ಪತ್ರೆಯಲ್ಲೇ ಅಧಿಕಾರಿಗಳ ಜೊತೆ ಸಭೆ ನಡೆಸಿದ ಜಯಲಲಿತಾ
ಸುಪ್ರೀಂಕೋರ್ಟ್ ತೀರ್ಪಿನ ಕುರಿತಂತೆ ಚರ್ಚೆ ನಡೆಸಿರುವ ಜಯಲಲಿತಾ
ಚೆನ್ನೈ(ಸೆ.27): ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಕುರಿತಂತೆ ತಮಿಳುನಾಡು ಸಿಎಂ ಜಯಲಲಿತಾ, ಆಸ್ಪತ್ರೆಯಲ್ಲೇ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ.
ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಯಲಲಿತಾ, ಅಲ್ಲಿಯೇ ಅಧಿಕಾರಿಗಳ ಸಭೆ ಕರೆದು, ಸುಪ್ರೀಂಕೋರ್ಟ್ ತೀರ್ಪಿನ ಕುರಿತಂತೆ ಚರ್ಚೆ ನಡೆಸಿದ್ದಾರೆ. ಸಂಜೆ 4.30ರಿಂದ 5.30ರವರೆಗೂ ಅಧಿಕಾರಿಗಳ ಜೊತೆ ಸಭೆ ನಡೆದಿದೆ.