ಸ್ಯಾಂಡಲ್‌ವುಡ್ ನಟ, ನಿರ್ಮಾಪಕರ ಮನೆ ಮೇಲೆ ಐಟಿ ದಾಳಿ | ಐಟಿಯವರು ಅವರ ಕರ್ತವ್ಯ ಮಾಡಿದ್ದಾರೆ ಎಂದ ಜಯಮಾಲಾ | ಐಟಿ ದಾಳಿಯಿಂದ ಕಲಾವಿದರಿಗೆ ಹಿನ್ನಡೆ ಆಗಲ್ಲ | 

ಉಡುಪಿ (ಜ. 05): ಸ್ಯಾಂಡಲ್ವುಡ್ ಮೇಲೆ ಐಟಿ ದಾಳಿ ವಿಚಾರವಾಗಿ ಸಚಿವೆ, ನಟಿ ಪ್ರತಿಕ್ರಿಯಿಸುತ್ತಾ, ಐಟಿಯವರು ಅವರ ಕೆಲಸ ಮಾಡುತ್ತಾರೆ. ಯಾರಿಗೂ ಇದರಿಂದ ತೊಂದರೆ ಆಗುವುದಿಲ್ಲ. ಕನ್ನಡ ಚಿತ್ರರಂಗ ಎತ್ತರಕ್ಕೆ ಬೆಳೆದಿರೋದು ಗೊತ್ತಾಗುತ್ತೆ. ಕಲಾವಿದರುಗಳಿಗೆ ಈ ದಾಳಿಯಿಂದ ಏನೂ ಹಿನ್ನಡೆ ಆಗುವುದಿಲ್ಲ ಎಂದು ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ರಾಜ್ ಕುಮಾರ್ ಮಕ್ಕಳು, ಯಶ್, ಸುದೀಪ್ ಬಹಳ ಪ್ರಾಮಾಣಿಕರಿದ್ದಾರೆ. ಕಲಾವಿದರ ಬಳಿ ಎರಡು ಒಡವೆ, ಬೆಳ್ಳಿತಟ್ಟೆ ಚೊಂಬು ಇರಬಹುದು. ನಿಯಮ ಪ್ರಕಾರ ಎಲ್ಲರೂ ಟಾಕ್ಸ್ ಕಟ್ಟಲೇಬೇಕು. ಎಲ್ಲಾ ಕಲಾವಿದರು ಟ್ಯಾಕ್ಸ್ ಕಟ್ಟಿರುತ್ತಾರೆ ಎಂದು ಸಚಿವೆ ಜಯಮಾಲಾ ಹೇಳಿದ್ದಾರೆ. 

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರವಾಗಿ ಮಾತನಾಡುತ್ತಾ, ಶಬರಿಮಲೆ ಬಗ್ಗೆ ಮಾತಾಡಿ ನಾನು ಸುಸ್ತಾಗಿಬಿಟ್ಟೆ. ನಾನು ಈ ಬಗ್ಗೆ ಏನೂ ಮಾತಾಡುವುದಿಲ್ಲ. ದೇವರನ್ನು ನಾನು ವ್ಯಾಪಾರಕ್ಕೆ ಇಟ್ಟಿಲ್ಲ. ನಾನು ದೇವರನ್ನು ನಂಬಿಕೆಯ ತಳಹದಿಯಲ್ಲಿ ನೋಡುವವಳು. ಶಬರಿಮಲೆಗೆ ಭಕ್ತಿಯಿಂದ ಹೋಗಬೇಕು ಎಂಬುದು ನನ್ನ ಭಾವನೆ ಎಂದು ಹೇಳಿದ್ದಾರೆ.