Asianet Suvarna News Asianet Suvarna News

ಮಾಧುಸ್ವಾಮಿ ಪರ ಸಿಎಂ ಕೇಳಿದ್ರು ಸಾರಿ; ಹೆಣ್ಣಿನಾಸೆಗೆ ಕ್ರಿಕೆಟಿಗರ ತಪ್ಪು ದಾರಿ; ನ.20 ರ ಟಾಪ್ 10 ಸುದ್ದಿ!

ಕುರುಬ ಸಮಾಜಕ್ಕೆ ಅವಮಾನ ಮಾಡಿರುವ ಮಾಧುಸ್ವಾಮಿ ಕ್ಷಮೆ ಕೇಳಲೇಬೇಕು ಎಂದು ಪಟ್ಟು ಹಿಡಿದಿರುವ ಸಮುದಾಯ ಬಂದ್‌ಗೆ ಕರೆ ನೀಡಿದೆ. ಇತ್ತ ಮಾಧುಸ್ವಾಮಿ ಕ್ಷಮೆ ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಬಿಲ್‌ಗೇಟ್ಸ್ ಜೊತೆಗಿನ ಫೋಟೋ ಹಂಚಿಕೊಳ್ಳೋ ಮೂಲಕ ಕೇಂದ್ರ ಸಚಿವೆ ಸ್ಮತಿ ಇರಾನಿ ಹಳೇ ಸೇಡು ತೀರಿಸಿಕೊಂಡಿದ್ದಾರೆ. ಕೆಪಿಎಲ್ ಫಿಕ್ಸಿಂಗ್ ಹೊಸ ತಿರುವು ಪಡೆದುಕೊಂಡಿದೆ. ಹೆಣ್ಣಿನ ಆಸೆಗೆ ಕ್ರಿಕೆಟಿಗರು ಫಿಕ್ಸಿಂಗ್ ನಡೆಸಿದ್ರಾ ಅನ್ನೋ ಅನುಮಾನ ಕಾಡತೊಡಗಿದೆ. ಇತ್ತ ನಟಿ ರಶ್ಮಿಕಾ ಮಂದಣ್ಣ ಪ್ರೀತಿ ಬಲೆಯಲ್ಲಿ ಬಿದ್ದಿದ್ದಾರಾ? ಇದಕ್ಕೆ ಮಂದಣ್ಣಾ ಉತ್ತರಿಸಿದ್ದಾರೆ. ಹೀಗೆ ನವೆಂಬರ್ 20 ರಂದು ಗಮನಸೆಳೆದ ಟಾಪ್ 10 ಸುದ್ದಿಗಲ ಆಗರ ಇಲ್ಲಿದೆ.

JC madhuswmay controversy to kpl fixing top 10 news of November 20
Author
Bengaluru, First Published Nov 20, 2019, 4:53 PM IST

1) ಬಿಲ್ ಗೇಟ್ಸ್ ಜೊತೆಗಿನ ಫೋಟೋ ಮೂಲಕ ಹಳೇ ಸೇಡು ತೀರಿಸಿಕೊಂಡ ಸ್ಮೃತಿ ಇರಾನಿ!

JC madhuswmay controversy to kpl fixing top 10 news of November 20
ಕೇಂದ್ರ ಸಟಿವೆ ಸ್ಮೃತಿ ಇರಾನಿ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದಾರೆ. ಇದೀಗ ವಿಶ್ವದ ಶ್ರೀಮಂತ ಬಿಲ್ ಗೇಟ್ಸ್ ಜೊತೆಗಿನ ಪೋಟೋ ಹಂಚಿಕೊಂಡಿರುವ ಇರಾನಿ, ಹಳೇ ಟೀಕೆಗೆ  ಸರಿಯಾಗಿ ತಿರುಗೇಟು ನೀಡಿದ್ದಾರೆ. 


2) ಯುವತಿಯರು ಸೇರಿ 11 ಮಂದಿಯಿಂದ ಗಾಂಜಾ ಪಾರ್ಟಿ? ಇಬ್ಬರು ಬಲಿ

JC madhuswmay controversy to kpl fixing top 10 news of November 20

ಗಾಂಜಾ ಚಟಕ್ಕೆ ಇಬ್ಬರು ಯುವಕರು ಬಲಿಯಾದ್ರಾ? ಇಂತಹದ್ದೊಂದು ಅನುಮಾನಸ್ಪದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.  ಬರ್ತ್ ಡೇ ಪಾರ್ಟಿಯಲ್ಲಿ ಇಬ್ಬರು ಸೇರಿದಂತೆ 11 ಯುವಕರು ಗಾಂಜಾ ಸೇವಿಸಿದ್ದಾರೆ. ಅದರಿಂದಾಗಿ ಅವರಿಬ್ಬರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಉಳಿದ 9 ಮಂದಿ ಕೂಡಾ ಅಸ್ವಸ್ಥರಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ. 

3) ವಿದ್ಯಾರ್ಥಿನಿಯನ್ನು ಚಲಿಸುವ ಬಸ್‌ನಿಂದ ತಳ್ಳಿದ ಕಂಡಕ್ಟರ್‌ ಸಸ್ಪೆಂಡ್!

JC madhuswmay controversy to kpl fixing top 10 news of November 20

ಬೆಂಗಳೂರಿನಲ್ಲಿ ಚಲಿಸುವ ಕೆಎಸ್‌ಆರ್‌ಟಿಸಿ ಬಸ್‌ನಿಂದ ವಿದ್ಯಾರ್ಥಿನಿಯನ್ನು ಹೊರಗೆ ತಳ್ಳಿದ ಘಟನೆ ಸಂಬಂಧ ಬಸ್‌ ನಿರ್ವಾಹಕ ಶಿವಶಂಕರ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಇಲಾಖಾ ತನಿಖೆಗೆ ಆದೇಶಿಸಲಾಗಿದೆ. ಘಟನೆ ಕುರಿತು ಈಗಾಗಲೇ ಇಲಾಖಾ ತನಿಖೆಗೆ ಆದೇಶಿಸಲಾಗಿದೆ. ಅಲ್ಲದೆ, ಗಾಯಾಳು ವಿದ್ಯಾರ್ಥಿನಿಯ ವೈದ್ಯಕೀಯ ವೆಚ್ಚವನ್ನು ನಿಗಮದಿಂದಲೇ ಭರಿಸಲಾಗುವುದು

4) ತಮಿಳುನಾಡಿನಲ್ಲಿ ರಜನಿ- ಕಮಲ್ ಮೈತ್ರಿ?

JC madhuswmay controversy to kpl fixing top 10 news of November 20JC madhuswmay controversy to kpl fixing top 10 news of November 20

2021ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಸಿದ್ಧತೆಯಲ್ಲಿರುವಾಗ ಕಮಲ್‌ಹಾಸನ್‌ ಮತ್ತು ರಜನೀಕಾಂತ್‌, ಅಗತ್ಯ ಬಿದ್ದರೆ ತಾವು ಒಂದಾಗಿ ಹೋರಾಡುವ ಘೋಷಣೆ ಮಾಡಿದ್ದಾರೆ. ಒಂದು ವೇಳೆ ಇದು ಸಾಧ್ಯವಾಗಿದ್ದೇ ಆದಲ್ಲಿ, ತಮಿಳುನಾಡಿನ ರಾಜಕೀಯದಲ್ಲಿ ಭಾರೀ ಬದಲಾವಣೆಯ ಎಲ್ಲಾ ಸಾಧ್ಯತೆಗಳೂ ಇವೆ. 

5) ಕುರುಬ ಸಮುದಾಯಕ್ಕೆ ಅವಮಾನ: ಮಾಧುಸ್ವಾಮಿ ಪರ ಸಿಎಂ ಕ್ಷಮೆ ಯಾಚನೆ

JC madhuswmay controversy to kpl fixing top 10 news of November 20

ಚಿಕ್ಕನಾಯಕನಹಳ್ಳಿ ಹುಳಿಯಾರು ಪಟ್ಟಣದ ಸರ್ಕಲ್‌ಗೆ ಕನಕವೃತ್ತ ಹೆಸರಿಡುವ ವಿಚಾರದಲ್ಲಿ, ಸಚಿವ ಜೆ.ಸಿ. ಮಾಧುಸ್ವಾಮಿ ಕುರುಬ ಸಮುದಾಯದ ಹಾಲುಮತ ಸ್ವಾಮೀಜಿಗೆ ಅವಮಾನ ಮಾಡಿರುವ ವಿವಾದಕ್ಕೆ ಕುರಿತಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯಿಸಿದರು. 

6) KPL ಫಿಕ್ಸಿಂಗ್: ಹೆಣ್ಣಿನ ಆಸೆಗೆ ಮಣ್ಣು ತಿಂದ್ರಾ ಕ್ರಿಕೆಟರ್ಸ್?.

 JC madhuswmay controversy to kpl fixing top 10 news of November 20

ಕೆಪಿಎಲ್ ಟೂರ್ನಿ ಫಿಕ್ಸಿಂಗ್ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಫ್ರಾಂಚೈಸಿ ಮಾಲಿಕರು ಹಾಗೂ ಆಟಗಾರರು ನಡುವೆ ಸುತ್ತಿಕೊಂಡಿದ್ದ ಫಿಕ್ಸಿಂಗ್ ನಂಟು ಇದೀಗ ಹನಿ ಟ್ರಾಪಿಂಕ್ ಜಾಲದ ನಂಟು ಕೂಡ ಸ್ಪಷ್ಟವಾಗುತ್ತಿದೆ. ಹೆಣ್ಣಿನ ಆಸೆ ತೋರಿಸಿ ಟ್ರಾಪ್ ಮಾಡಿ ಆಟಗಾರರನ್ನು ಫಿಕ್ಸಿಂಗ್‌ಗೆ ಬಳಕೆ ಮಾಡಲಾಗುತ್ತಿತ್ತು ಅನ್ನೋ ಸ್ಪೋಟಕ ಮಾಹಿತಿ ಹೊರಬಿದ್ದಿದೆ.


7) 'ಹೌದು, ನಾನು ಪ್ರೀತಿಸುತ್ತಿದ್ದೇನೆ' ಎಂದ ರಶ್ಮಿಕಾ ಮಂದಣ್ಣ

JC madhuswmay controversy to kpl fixing top 10 news of November 20

ರಶ್ಮಿಕಾ ಮಂದಣ್ಣ ತೆಲುಗು ಇಂಡಸ್ಟ್ರಿಗೆ ಹೋದ ನಂತರ ಅವರ ಬಗ್ಗೆ ಇದ್ದ ಇಮೇಜ್ ಬದಲಾಗಿ ಹೋಗಿದೆ. ವಿಜಯ ದೇವರಕೊಂಡ ಜೊತೆಗೆ ಕುಚ್ ಕುಚ್ ಹೋ ರಹಾ ಹೇ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ರಶ್ಮಿಕಾ ಉತ್ತರ ಕೊಟ್ಟಿದ್ದಾರೆ. 

8) ಏರ್‌ಟೆಲ್‌, ವೊಡಾಫೋನ್‌ ಬೆನ್ನಲ್ಲೇ ಜಿಯೋ ದರ ಏರಿಕೆ ಘೋಷಣೆ

JC madhuswmay controversy to kpl fixing top 10 news of November 20

ಸೆಪ್ಟೆಂಬರ್‌ ತಿಂಗಳಲ್ಲಿ ಏರ್‌ಟೆಲ್‌ ಹಾಗೂ ವೊಡಾಫೋನ್‌ಗಳು 49 ಲಕ್ಷ ಚಂದಾದಾರರನ್ನು ಕಳೆದುಕೊಂಡಿವೆ. ಇದರಲ್ಲಿ ಏರ್‌ಟೆಲ್‌ ಪಾಲು 23.8 ಲಕ್ಷ ಹಾಗೂ ವೊಡಾಫೋನ್‌ 25.7 ಲಕ್ಷ. ಆದರೆ ಜಿಯೋ ಹಾಗೂ ಬಿಎಸ್ಸೆನ್ನೆಲ್‌ ಚೇತರಿಸಿಕೊಂಡಿವೆ.

9) 'ಕತ್ತೆ, ನಾಯಿ, ಮೀನು, ಕುದುರೆ, ಕೋಣಗಳಿರುವಾಗ ಪೂಜನೀಯ ಗೋವುಗಳನ್ನೇಕೆ ತಿನ್ನುತ್ತೀರಿ?'

JC madhuswmay controversy to kpl fixing top 10 news of November 20

 ತುಳಸಿಯಿಂದ ಮೊಬೈಲ್‌ ರೆಡಿಯೇಶನ್‌ ಕಡಿಮೆಯಾಗುತ್ತದೆ ಎಂದು ಶನಿವಾರ ಹೇಳಿದ್ದ ಬಾಬಾ ರಾಮ್‌ದೇವ್‌, ಮಾಂಸಾಹಾರ ಸೇವನೆಯಿಂದ ಜಾಗತಿಕ ತಾಪಮಾನ ಹೆಚ್ಚುತ್ತದೆ ಎನ್ನುವ ವಾದವನ್ನು ಮಂಗಳವಾರ ಮಂಡಿಸಿದ್ದಾರೆ. ಮಂಗಳವಾರ ಕೃಷ್ಣಮಠದಲ್ಲಿ ನಡೆದ ಸಂತ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂದು ವಿಜ್ಞಾನಿಗಳು ಜಾಗತಿಕ ತಾಪಮಾನ ಹೆಚ್ಚಳಕ್ಕೆ ನಾನಾ ಕಾರಣಗಳನ್ನು ಕಂಡು ಹಿಡಿಯುತ್ತಿದ್ದಾರೆ. ಆದರೆ ನಿಜವಾದ ಕಾರಣ ಮಾಂಸಾಹಾರ ಹೆಚ್ಚಾಗಿರುವುದೇ ಕಾರಣ, ಇದನ್ನೇ ವಿಜ್ಞಾನಿಗಳು ಪತ್ತೆ ಮಾಡಿಲ್ಲ ಎಂದರು.

10) ತರೂರ್ ಫೋಟೋಸ್ ವೈರಲ್: ಕಾಲೇಜು ಮಸ್ತಿ, ರೊಮ್ಯಾಂಟಿಕ್ ಲುಕ್ ರಿವೀಲ್

JC madhuswmay controversy to kpl fixing top 10 news of November 20

ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಲೋಕಸಭಾ ಕ್ಷೇತ್ರದ ಸಂಸದ ಶಶಿ ತರೂರ್ ತಮ್ಮ ನೂತನ, ವಿನೂತನ ಆಂಗ್ಲ ಪದಗಳಿಂದ ಸೌಂಡ್ ಮಾಡುತ್ತಿರುತ್ತಾರೆ. ಅವರು ಬಳಸುವ ಆಂಗ್ಲ ಪದಗಳು ಕೆಲವೊಮ್ಮೆ ಚೆನ್ನಾಗಿ ಬಲ್ಲ ಸಾಹಿತಿಗಳ ತಲೆ ತಿರುಗುವಂತೆ ಮಾಡುತ್ತವೆ. ಇನ್ನು ಕೆಲವೇ ದಿನಗಳಲ್ಲಿ ತರೂರ್ ಸ್ಟ್ಯಾಂಡಪ್ ಕಾಮಿಡಿಯನ್ ಆಗಿ ಕಾಣಿಸಿಕೊಳ್ಳಲಿದ್ದು, ಇದನ್ನು ಅವರು ಖುದ್ದು ಬಹಿರಂಗಪಡಿಸಿದ್ದಾರೆ.

Follow Us:
Download App:
  • android
  • ios