ಹುಬ್ಬಳ್ಳಿಯಲ್ಲಿ ಸಮನ್ವಯ ಸಮಿತಿ ಅಧ್ಯಕ್ಷ ಮಾಜಿ ಸಿಎಂ ಸಿದ್ದಾರಾಮಯ್ಯ ಮಾತನಾಡಿದ್ದಾರೆ. ಉಪಚುನಾವಣೆ ನಡೆಯುವ ಅಷ್ಟೂ ಕ್ಷೇತ್ರದಲ್ಲಿ ಮೈತ್ರಿ ಸರ್ಕಾರದ ಅಭ್ಯರ್ಥಿಗಳೆ ಜಯ ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿ[ಅ.15]  ಉಪ ಚುನಾವಣೆಯ ಎಲ್ಲ ಕ್ಷೇತ್ರದಲ್ಲಿ ಗೆಲುವು ನಮ್ಮದೇ. ಸಮ್ಮಿಶ್ರ ಸರ್ಕಾರದಲ್ಲಿ ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

 ಬಿಜೆಪಿಯಲ್ಲಿ ಕೆಲ ಕ್ಷೇತ್ರದಲ್ಲಿ ಕಣಕ್ಕಿಳಿಸಲು ಅಭ್ಯರ್ಥಿಗಳೇ ಇಲ್ಲ. ಯಡಿಯೂರಪ್ಪ ಮೊದಲ ತಮ್ಮ ಪಕ್ಷವು ಭಿನ್ನಮತ ಶಮನ ಮಾಡಿಕೊಳ್ಳಲಿ. ಬಳ್ಳಾರಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಯಾವುದೇ ಭಿನ್ನಮತವ ಇಲ್ಲ. ಸಮ್ಮಿಶ್ರ ಸರ್ಕಾರದಿಂದ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ ಬಿನ್ನಮತ ಇರುವುದು ಬಿಜೆಪಿಯಲ್ಲಿ ಎಂದು ತಿರುಗೇಟು ನೀಡಿದ್ದಾರೆ.

ಈ ಚುನಾವಣೆಯಲ್ಲಿ ಕೋಮುವಾದಿ ಪಕ್ಷವನ್ನು ಸೋಲಿಸುವುದು ನಮ್ಮ ಗುರಿ. ಉಪ ಚುನಾವಣಾ ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಸಂಪುಟ ವಿಸ್ತರಣೆ ವೇಳೆ ಉತ್ತರ ಕರ್ನಾಟಕಕ್ಕೆ ಯಾವುದೇ ಅನ್ಯಾಯ ಆಗದು ಎಂದು ಮಾಜಿ ಸಿಎಂ ಅಭಯ ನೀಡಿದ್ದಾರೆ.