ಜೆಡಿಎಸ್ ಯುವ ಮುಖಂಡ ಪ್ರಜ್ವಲ್ ರೇವಣ್ಣ ತಮ್ಮ ಪಕ್ಷದ ವಿರುದ್ಧವೇ ಗುಡುಗು
ಜೆಡಿಎಸ್ ಯುವ ಮುಖಂಡ ಪ್ರಜ್ವಲ್ ರೇವಣ್ಣ ತಮ್ಮ ಪಕ್ಷದ ವಿರುದ್ಧವೇ ಮತ್ತೊಮ್ಮೆ ಗುಡುಗಿದ್ದಾರೆ.
ಬೆಂಗಳೂರು (ಅ.11): ಜೆಡಿಎಸ್ ಯುವ ಮುಖಂಡ ಪ್ರಜ್ವಲ್ ರೇವಣ್ಣ ತಮ್ಮ ಪಕ್ಷದ ವಿರುದ್ಧವೇ ಮತ್ತೊಮ್ಮೆ ಗುಡುಗಿದ್ದಾರೆ.
ರಾಜರಾಜೇಶ್ವರಿ ನಗರದ ಜೆಡಿಎಸ್ ಸಭೆಯಲ್ಲಿ ಮಾತನಾಡಿ, ಹುಣಸೂರು ಘಟನೆಯಿಂದ ನಾನು ಸಾಕಷ್ಟು ನೊಂದಿದ್ದೇನೆ. ಕೆಲವು ಬಕೆಟ್ ರಾಜಕಾರಣಿಗಳು ನನ್ನ ವಿರುದ್ಧ ಷಡ್ಯಂತ್ರ ಮಾಡಿ, ನನ್ನ ಹೇಳಿಕೆ ತಿರುಚಿ, ರಾಜಕೀಯ ಬೆಳವಣಿಗೆಗೆ ಅಡ್ಡಿಪಡಿಸಿದರು. ನಾನು ಬೆಳೆದರೆ ಅವರ ಕಳ್ಳಾಟ ತಡೆಯುತ್ತೇನೆ ಅನ್ನೋ ಅವರಿಗೆ ಭಯ ಕಾಡ್ತಿತ್ತು ಎಂದರು. ರಾಜರಾಜೇಶ್ವರಿ ತಾಯಿ ಆಶೀರ್ವಾದ ನಮ್ಮ ಕುಟುಂಬದ ಮೇಲಿದೆ. ಆರ್ ಆರ್ ನಗರ ನನಗೆ ಪುನರ್ಜನ್ಮ ನೀಡಲಿದೆ ಎಂದು ಭಾವಿಸುತ್ತೇನೆ ಎಂದು ತಮ್ಮ ರಾಜಕೀಯ ನಡೆಯನ್ನು ಸ್ಪಷ್ಟಪಡಿಸಿದರು.