Asianet Suvarna News Asianet Suvarna News

ಸಿದ್ದರಾಮಯ್ಯ ಹೊಗಳಿದ ಜೆಡಿಎಸ್‌ ರಾಜ್ಯಾಧ್ಯಕ್ಷ ವಿಶ್ವನಾಥ್‌!

ಸಿದ್ದರಾಮಯ್ಯ ಹೊಗಳಿದ ಜೆಡಿಎಸ್‌ ರಾಜ್ಯಾಧ್ಯಕ್ಷ ವಿಶ್ವನಾಥ್‌| ದಿಢೀರ್‌ ನಿಲುವು ಬದಲಿಸಿದ ಎಚ್. ವಿಶ್ವನಾಥ್

JDS President H Vishwanath Praises Siddaramaiah
Author
Bangalore, First Published May 20, 2019, 8:59 AM IST

ಮೈಸೂರು[ಮೇ.20]: ಕಳೆದ ಕೆಲದಿನಗಳಿಂದ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿಯೇ ಕಿಡಿಕಾರುತ್ತಿದ್ದ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಅವರು ಈಗ ದಿಢೀರ್‌ ತಮ್ಮ ನಿಲುವು ಬದಲಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು ಬಹಿರಂಗವಾಗಿಯೇ ಹೊಗಳಿದ್ದಾರೆ.

ನಗರದಲ್ಲಿ ಭಾನುವಾರ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನ ಕುಮಾರ್‌ ಅವರ ಕೃತಿ ಬಿಡುಗಡೆ ಮಾಡಿ ಮಾತನಾಡಿದ ಅವರು, ರೈತನ ಮಗನಾಗಿ ಹುಟ್ಟಿದ ಸಿದ್ದರಾಮಯ್ಯ ಆಕ್ಸ್‌ಫರ್ಡ್‌ನಲ್ಲಿ ಓದಿಲ್ಲ, ಆದರೆ ಹದಿಮೂರು ಬಾರಿ ಬಜೆಟ್‌ ಮಂಡಿಸಿ ಗಮನ ಸೆಳೆದಿದ್ದಾರೆ ಎಂದರು.

ಎಚ್‌.ಎಂ.ಚನ್ನಬಸಪ್ಪ, ಎನ್‌.ರಾಚಯ್ಯ, ರಾಜಶೇಖರಮೂರ್ತಿ, ಸಿದ್ದರಾಮಯ್ಯ ಹೀಗೆ ಅನೇಕರು ಮೈಸೂರಿನವರು ನಾಯಕರಾದರು. ಯಶೋಧರಮ್ಮ ದಾಸಪ್ಪ ಅವರು ದಲಿತ ಮಕ್ಕಳಿಗೆ ಮನೆಯನ್ನೇ ಬಿಟ್ಟುಕೊಟ್ಟಿದ್ದಾರೆ, ರೈತನ ಮಗನಾಗಿ ಹುಟ್ಟಿದ ಸಿದ್ದರಾಮಯ್ಯ ಆಕ್ಸ್‌ಫರ್ಡ್‌ ಓದದೆಯೂ 13 ಬಜೆಟ್‌ ಮಂಡಿಸಿ ಗಮನ ಸೆಳೆದಿದ್ದಾರೆ ಎಂದು ಸ್ಮರಿಸಿದರು.

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.

Follow Us:
Download App:
  • android
  • ios