ಇಬ್ಬರ ಜಗಳದಲ್ಲಿ ಮೂರನೆಯವರಿಗೆ ದಕ್ಕುತ್ತಾ ಸ್ಥಾನ.? ರಾಜರಾಜೇಶ್ವರಿ ನಗರದಲ್ಲಿ ಜೆಡಿಎಸ್ ಟಿಕೆಟ್ ಯಾರಿಗೆ ಎನ್ನುವ ಪ್ರಶ್ನೆ ಇದೀಗ ಮೂಡಿದ್ದು, ಡಿಕೆ ರವಿ ಮಾವ ಹನುಮಂತ ರಾಯಪ್ಪಗೆ ಆರ್ ಆರ್ ನಗರ ಟಿಕೆಟ್‌ ಪಕ್ಕಾ ಆಗಿದೆ ಎನ್ನುವ ಮಾತುಗಳು ಕೇಳಿ ಬಂದಿವೆ.

ಬೆಂಗಳೂರು : ಇಬ್ಬರ ಜಗಳದಲ್ಲಿ ಮೂರನೆಯವರಿಗೆ ದಕ್ಕುತ್ತಾ ಸ್ಥಾನ.? ರಾಜರಾಜೇಶ್ವರಿ ನಗರದಲ್ಲಿ ಜೆಡಿಎಸ್ ಟಿಕೆಟ್ ಯಾರಿಗೆ ಎನ್ನುವ ಪ್ರಶ್ನೆ ಇದೀಗ ಮೂಡಿದ್ದು, ಡಿಕೆ ರವಿ ಮಾವ ಹನುಮಂತ ರಾಯಪ್ಪಗೆ ಆರ್ ಆರ್ ನಗರ ಟಿಕೆಟ್‌ ಪಕ್ಕಾ ಆಗಿದೆ ಎನ್ನುವ ಮಾತುಗಳು ಕೇಳಿ ಬಂದಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

13 ರಂದು ನಡೆಯಲಿರುವ ಸಮಾವೇಶದಲ್ಲಿ ಈ ಸಂಬಂಧ ಘೋಷಣೆ ಮಾಡುವ ಸಾದ್ಯತೆ ಇದೆ. ಎಸ್ ಎಂ ಕೃಷ್ಣ ಬೆಂಬಲಿಗರರಾಗಿರುವ ಹನುಮಂತರಾಯಪ್ಪ ಇದುವರೆಗೆ ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿದ್ದರು.

ಆದರೆ ಈಗ ಬಿಜೆಪಿಯಲ್ಲಿಯೇ ಅಸಮಾಧಾನ ಪರಿಸ್ಥಿತಿ ಇದೆ. ಹಾಗಾಗಿ ಜೆಡಿಎಸ್ ಸೇರ್ಪಡೆ ಯಾಗಲು ಚಿಂತನೆ ನಡೆಸಿದ್ದು, ಪ್ರಜ್ವಲ್ ಜೊತೆ ಈಗಾಗಲೇ ಮಾತುಕತೆಯನ್ನೂ ನಡೆಸಿದ್ದಾರೆ ಎನ್ನಲಾಗಿದೆ.

ಪ್ರಜ್ವಲ್ ಗೆ ಟಿಕೆಟ್ ತಪ್ಪಿದ್ದರಿಂದ ಹನುಮಂತ ರಾಯಪ್ಪಗೆ ಟಿಕೆಟ್ ದೊರಕುವ ಸಾದ್ಯತೆ ಗಳೂ ಇವೆ. ಹನುಮಂತ ರಾಯಪ್ಪ ಜೆಡಿಎಸ್ ಅಭ್ಯರ್ಥಿ ಆದರೆ ಪ್ರಜ್ವಲ್ ಕೂಡಾ ಬೆಂಬಲಿಸುವ ಸಾದ್ಯತೆ ಇದೆ.