ಕಲ್ಲಿದ್ದಲು ಹಗರಣದಲ್ಲಿ ಜಾರ್ಖಂಡ್ ಮಾಜಿ ಸಿಎಂ ಮಧು ದೋಷಿ; ಸಿಬಿಐ ಕೋರ್ಟ್
ಕಲ್ಲಿದ್ದಲು ಹಗರಣದಲ್ಲಿ ಜಾರ್ಖಂಡ್ ಮಾಜಿ ಸಿಎಂ ಮಧು ಕೋಡಾ ಸೇರಿದಂತೆ 7 ಮಂದಿ ದೋಷಿಯೆಂದು ಸಿಬಿಐ ಕೋರ್ಟ್ ತೀರ್ಪು ನೀಡಿದೆ.
ನವದೆಹಲಿ (ಡಿ.13): ಕಲ್ಲಿದ್ದಲು ಹಗರಣದಲ್ಲಿ ಜಾರ್ಖಂಡ್ ಮಾಜಿ ಸಿಎಂ ಮಧು ಕೋಡಾ ಸೇರಿದಂತೆ 7 ಮಂದಿ ದೋಷಿಯೆಂದು ಸಿಬಿಐ ಕೋರ್ಟ್ ತೀರ್ಪು ನೀಡಿದೆ.
ಕಲ್ಲಿದ್ದಲು ಮಾಜಿ ಕಾರ್ಯದರ್ಶಿ ಎಚ್ ಸಿ ಗುಪ್ತಾ, ಮಾಜಿ ಕಾರ್ಯದರ್ಶಿ ಎ ಕೆ ಬಸು, ಮಧು ಕೋಡಾ ಸೇರಿದಂತೆ 7 ಮಂದಿ ದೋಷಿಗಳೆಂದು ಸಿಬಿಐ ತೀರ್ಪು ನೀಡಿದೆ. ನಾಳೆ ಶಿಕ್ಷೆ ಪ್ರಮಾಣ ಪ್ರಕಟಗೊಳ್ಳುವ ಸಾಧ್ಯತೆಯಿದೆ.
ಕಲ್ಕತ್ತಾ ಮೂಲದ ಕಂಪನಿಯೊಂದಕ್ಕೆ ಕಲ್ಲಿದ್ದಲು ಹಂಚಿಕೆ ವಿಚಾರದಲ್ಲಿ ಅಕ್ರಮ ಎಸಗಿರುವುದು ಸಾಬೀತಾಗಿದೆ.