ವಿಶ್ವವಿದ್ಯಾನಿಲಯದ ರೀಡಿಂಗ್ ರೂಂನಲ್ಲಿ ನೇಣಿಗೆ ಶರಣಾದ JNU ವಿದ್ಯಾರ್ಥಿ| ಸಾವಿಗೂ ಮುನ್ನ ಅಧ್ಯಾಪಕರಿಗೆ ಇ-ಮೇಲ್| ಸಾವಿನ ಸುತ್ತ ಅನುಮಾನದ ಹುತ್ತ

ನವದೆಹಲಿ[ಮೇ.17]: ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಾವಿನ ಬೆನ್ನಲ್ಲೇ ಹಲವಾರು ಅನುಮಾನಗಳು ವ್ಯಕ್ತವಾಗಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸ್ನಾತಕೋತ್ತರ ಶಿಕ್ಷಣ ಪಡೆಯುತ್ತಿದ್ದ ರಿಷಿ ಥಾಮಸ್ ಹೆಸರಿನ ವಿದ್ಯಾರ್ಥಿ, ವಿಶ್ವವಿದ್ಯಾನಿಲಯದ ಲೈಬ್ರರಿ ಹೊರಗಿರುವ ರೀಡಿಂಗ್ ರೂಂನಲ್ಲಿ ನೇಣು ಹಾಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸುದ್ದಿ ತಿಳಿಯುತ್ತಿದ್ದಂತೆಯೇ ಇಲ್ಲಿನ ಆಡಳಿತ ಮಂಡಳಿ ಮಧ್ಯಾಹ್ನ ಸುಮಾರು 1 ಗಂಟೆಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 

ಇನ್ನು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ತನ್ನ ಧ್ಯಾಪಕರಿಗೆ ಕಾರಣಗಳನ್ನು ವಿವರವಾಗಿ ತಿಳಿಸುವ ಈಮೇಲ್ ಒಂದನ್ನೂ ಕಳುಹಿಸಿದ್ದಾನೆ ಎನ್ನಲಾಗಿದೆ. ಆದರೆ ಈ ಕಾರಣಗಳನ್ನು ಇನ್ನೂ ಬಹಿರಂಗಪಡಿಸಿಲ್ಲ.

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.