ಹಿರಿಯ ಪತ್ರಕರ್ತ ರವಿ ಬೆಳಗೆರೆ ಆರೋಗ್ಯದಲ್ಲಿ ಏರುಪೇರಾಗಿದೆ. ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು, [ಸೆ.22]: ಹಿರಿಯ ಪತ್ರಕರ್ತ ರವಿ ಬೆಳಗೆರೆ ಆರೋಗ್ಯದಲ್ಲಿ ಏರುಪೇರಾಗಿದೆ. ನಿನ್ನೆ ರಾತ್ರಿ [ಶುಕ್ರವಾರ] ರವಿ ಬೆಳಗೆರೆ ಅವರಿಗೆ ಲಘು ಹೃದಯಾಘಾತವಾಗಿದ್ದು, ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸದ್ಯ ರವಿ ಬೆಳಗೆರೆ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ತಿಳಿದುಬಂದಿದೆ.
ಕೆಲ ತಿಂಗಳಿಂದ ಅಷ್ಟೇ ರವಿ ಬೆಳಗೆರೆ ಅವರು ಇದೇ ಹೃದಯ ಸಂಬಂಧಿ ಕಾಯಿಲೆಗೆ ಜಯದೇವ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು.
