ವಿವಿಧ ರಾಜ್ಯಗಳ ಹೈಕೋರ್ಟ್ ನ್ಯಾಯಾಧೀಶರ ನೇಮಕಾತಿ ವಿಳಂಬವಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಮುಖ್ಯ ನ್ಯಾ.ಟಿ.ಎಸ್. ಠಾಕೂರ್ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ನವದೆಹಲಿ (ನ.26): ವಿವಿಧ ರಾಜ್ಯಗಳ ಹೈಕೋರ್ಟ್ ನ್ಯಾಯಾಧೀಶರ ನೇಮಕಾತಿ ವಿಳಂಬವಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಮುಖ್ಯ ನ್ಯಾ.ಟಿ.ಎಸ್. ಠಾಕೂರ್ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

“ಪ್ರಸ್ತುತ ಹೈಕೋರ್ಟ್’ಗಳಲ್ಲಿ 500 ನ್ಯಾಯಾಧೀಶ ಹುದ್ದೆಗಳು ಖಾಲಿಯಿವೆ. ಅವರೆಲ್ಲ ಇಂದು ಕಾರ್ಯ ನಿರ್ವಹಿಸಬೇಕಿತ್ತು. ಆದರೆ ಈಗ ಆ ಸ್ಥಾನಗಳು ಖಾಲಿ ಬಿದ್ದಿವೆ. ಜೊತೆಗೆ ನ್ಯಾಯಮಂಡಳಿಗಳಿಗೆ ಸರಿಯಾದ ಸೌಲಭ್ಯವನ್ನು ಇನ್ನೂ ಒದಗಿಸಿಲ್ಲ ಹಾಗಾಗಿ ಅವು ಕೂಡಾ ಖಾಲಿ ಬಿದ್ದಿದೆ ” ಎಂದು ನ್ಯಾ. ಠಾಕೂರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಸರ್ಕಾರ ಸರಿಯಾಗಿ ಸೌಲಭ್ಯವನ್ನು ಒದಗಿಸಲು ಸಿದ್ಧವಿಲ್ಲ. ನ್ಯಾಯಮಂಡಳಿಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಇದುವರೆಗೂ ಭರ್ತಿ ಮಾಡಿಲ್ಲ. ಸುಪ್ರೀಂಕೋರ್ಟ್ ನ ಯಾವ ನಿವೃತ್ತ ನ್ಯಾಯಾಧೀಶರೂ ನ್ಯಾಯಮಂಡಳಿಯ ಹುದ್ದೆಯನ್ನು

ಅಲಂಕರಿಸಲು ಸಿದ್ದವಿಲ್ಲದಿರುವ ಸ್ಥಿತಿ ನಿರ್ಮಾಣವಾಗಿದೆ. ನೇಮಕಾತಿಯನ್ನು ಒಪ್ಪಿಕೊಳ್ಳುವಂತೆ ನನ್ನ ಸಹೋದ್ಯೋಗಿಗಳ ಮನವೊಲಿಸುವುದೇ ನನ್ನ ಕೆಲಸವಾಗಿದೆ” ಎಂದು ನ್ಯಾ. ಠಾಕೂರ್ ಹೇಳಿದ್ದಾರೆ.