ಬಾಲಿವುಡ್ ನಟಿ ಜೂಹಿ ಚಾವ್ಲಾ ಸಚಿವ ಯು.ಟಿ ಖಾದರ್ ಅವರಿಗೆ ಕರೆ ಮಾಡಿ ಶ್ಲಾಘಿಸಿದ್ದಾರೆ. ದೇಶದಲ್ಲೇ ಮೊದಲ ಬಾರಿಗೆ ರೂಪಿಸಿರುವ ಟವರ್‌ ನೀತಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಮಂಗಳೂರು: ರಾಜ್ಯದಲ್ಲಿ ಮೊಬೈಲ್‌ ಮತ್ತು ಇತರ ಟವರ್‌ ಅನುಷ್ಠಾನಕ್ಕೆ ದೇಶದಲ್ಲೇ ಮೊದಲ ಬಾರಿಗೆ ರೂಪಿಸಿರುವ ಟವರ್‌ ನೀತಿಗೆ ಹೆಸರಾಂತ ಬಾಲಿವುಡ್‌ ನಟಿ ಜೂಹಿ ಚಾವ್ಲಾ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. 

Add Asianetnews Kannada as a Preferred SourcegooglePreferred

ಜೂಹಿ ಅವರ ಆಪ್ತ ಸಹಾಯಕ ಮುನ್ಷಿ ಅವರು ಸಚಿವ ಖಾದರ್‌ ಅವರಿಗೆ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ದೇವಾಲಯ, ಶಾಲೆ, ಆಸ್ಪತ್ರೆಗಳೊಂದಿಗೆ ವಸತಿ ಪ್ರದೇಶಗಳನ್ನೂ ಈ ನೀತಿಯ ಅಡಿಯಲ್ಲಿ ಸೇರಿಸಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ಇದನ್ನು ಪರಿಶೀಲಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್‌ ಸುದ್ದಿಗಾರರಿಗೆ ತಿಳಿಸಿದರು.

ಟವರ್‌ ನೀತಿ ಅಧಿಸೂಚನೆ ಪ್ರಕಟವಾದ ಮೂರು ತಿಂಗಳೊಳಗೆ ಎಲ್ಲ ಟವರ್‌ಗಳು ಈ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಇಲ್ಲದಿದ್ದರೆ ಟವರ್‌ಗಳನ್ನೇ ರದ್ದುಗೊಳಿಸಲಾಗುವುದು ಎಂದು ಹೇಳಿದರು.