Asianet Suvarna News Asianet Suvarna News

ಕರ್ನಾಟಕ ಹೈಕೋರ್ಟ್ ಸಿಜೆ ಈಗ ಸುಪ್ರೀಂಕೋರ್ಟ್ ಜಡ್ಜ್

ಸುಪ್ರೀಂಕೋರ್ಟ್ ಕೊಲೀಜಿಯಂ ಶಿಫಾರಸ್ಸಿಗೆ ರಾಷ್ಟ್ರಪತಿ ಅಂಕಿತ ಹಾಕಿದ್ದು, ಕರ್ನಾಟಕ ಹೈಕೋರ್ಟ್ ಸಿಜೆ ಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.

Justice Dinesh Maheshwari, Sanjiv Khanna Appointed as SC Judges by President
Author
Bengaluru, First Published Jan 16, 2019, 9:14 PM IST

ಬೆಂಗಳೂರು, [ಜ.16]: ಕರ್ನಾಟಕ ಹೈ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರಿಗೆ ನ್ಯಾಯಮೂರ್ತಿಗೆ ಪದೋನ್ನತಿ ದೊರೆತಿದೆ.

ಸುಪ್ರೀಂಕೋರ್ಟ್ ಕೊಲೀಜಿಯಂ ಶಿಫಾರಸ್ಸಿಗೆ ಇಂದು [ಬುಧವಾರ] ರಾಷ್ಟ್ರಪತಿ ರಾಮನಾಥ್ ಕೋವಿಂದ್  ಅಂಕಿತ ಹಾಕಿದ್ದು, ಕರ್ನಾಟಕ ಹೈಕೋರ್ಟ್ ಸಿಜೆ ದಿನೇಶ್ ಮಹೇಶ್ವರಿ ಹಾಗೂ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ಸಂಜೀವ್ ಖನ್ನಾ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.

ಈ ಬಗ್ಗೆ ಕೇಂದ್ರ ಕಾನೂನು ಸಚಿವಾಲಯ ಅಧಿಸೂಚನೆ ತಿಳಿಸಿದ್ದು, ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ರ ಅಂಕಿತ ಬಿದ್ದ ನಂತರ ಆದೇಶ ಹೊರಡಿಸಲಾಗಿದೆ.

ಜ.10ರಂದು ನಡೆದಿದ್ದ ಸುಪ್ರೀಂಕೋರ್ಟ್ ಕೊಲೀಜಿಯಂ ಸಭೆಯಲ್ಲಿ ನ್ಯಾಯಮೂರ್ತಿಗಳಾದ ಮಹೇಶ್ವರಿ ಹಾಗೂ ಖನ್ನಾ ಹೆಸರು ಅಂತಿಮಗೊಳಿಸಲಾಗಿತ್ತು. 

Follow Us:
Download App:
  • android
  • ios