ಕೋಲಾರದಲ್ಲಿ ಕೈಲಾಶ್ ಸತ್ಯಾರ್ಥಿ ‘ಭಾರತ ಯಾತ್ರೆ'
ಮಕ್ಕಳ ರಕ್ಷಣೆಯಾಗದೆ ದೇಶದ ರಕ್ಷಣೆ ಸಾಧ್ಯವಿಲ್ಲ, ದೇಶ ವಿವಿಧ ರಂಗಗಳಲ್ಲಿ ಅಭಿವೃದ್ಧಿ ಹೊಂದುತ್ತಿರುವುದು ಹೆಮ್ಮೆಯ ಸಂಗತಿಯಾದರೂ ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳಿಂದಾಗಿ ತಲೆ ತಗ್ಗಿಸುವಂತಾಗಿದೆ ಎಂದು ನೊಬೆಲ್ ಪ್ರಶಸ್ತಿ ಪುರಸ್ಕೃತ ಕೈಲಾಶ್ ಸತ್ಯಾರ್ಥಿ ಅಭಿಪ್ರಾಯಪಟ್ಟರು.
ಕೋಲಾರ: ಮಕ್ಕಳ ರಕ್ಷಣೆಯಾಗದೆ ದೇಶದ ರಕ್ಷಣೆ ಸಾಧ್ಯವಿಲ್ಲ, ದೇಶ ವಿವಿಧ ರಂಗಗಳಲ್ಲಿ ಅಭಿವೃದ್ಧಿ ಹೊಂದುತ್ತಿರುವುದು ಹೆಮ್ಮೆಯ ಸಂಗತಿಯಾದರೂ ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳಿಂದಾಗಿ ತಲೆ ತಗ್ಗಿಸುವಂತಾಗಿದೆ ಎಂದು ನೊಬೆಲ್ ಪ್ರಶಸ್ತಿ ಪುರಸ್ಕೃತ ಕೈಲಾಶ್ ಸತ್ಯಾರ್ಥಿ ಅಭಿಪ್ರಾಯಪಟ್ಟರು.
ಜಿಲ್ಲಾ ಕಾನೂನು ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಜಿಪಂನಿಂದ ನಗರದ ಚೆನ್ನಯ್ಯರಂಗಮಂದಿರದಲ್ಲಿ ಆಯೋಜಿಸಿದ್ದ ‘ಭಾರತ ಯಾತ್ರೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದೇಶದಲ್ಲಿ ಮಕ್ಕಳ ದೌರ್ಜನ್ಯಸಂಬಂಧ ಶೇ.4ರಷ್ಟು ಪ್ರಕರಣಗಳಲ್ಲಿ ಮಾತ್ರ ಶಿಕ್ಷೆಯಾಗುತ್ತಿದೆ. ಉಳಿದವುಗಳಲ್ಲಿ ಕೆಲವು ಸಾಕ್ಷ್ಯಗಳಿಲ್ಲದೆ ಖುಲಾಸೆಯಾದರೆ, ಮತ್ತಷ್ಟು ಪ್ರಕರಣಗಳು ಇತ್ಯರ್ಥ ಆಗದೆ ಉಳಿದಿವೆ ಎಂದು ಬೇಸರ ವ್ಯಕ್ತಪಡಿಸಿದರು.