ಕರ್ತವ್ಯದಲ್ಲಿದ್ದ ಎಎಸ್’ಐ ಅಧಿಕಾರಿಯೋರ್ವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಕಲಬುರಗಿ : ಕರ್ತವ್ಯದಲ್ಲಿದ್ದ ಎಎಸ್’ಐ ಅಧಿಕಾರಿಯೋರ್ವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅಂಬಾರಾಯ್ ಪಾಟೀಲ್ (57) ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ರಟಕಲ್ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

Add Asianetnews Kannada as a Preferred SourcegooglePreferred

ರಾತ್ರಿ ಠಾಣೆಯಲ್ಲಿದ್ದಾಗ ಎದೆನೋವು ಕಾಣಿಸಿಕೊಂಡಿತ್ತು. ಪಕ್ಕದ ಕ್ವಾಟ್ರಸ್’ಗೆ ತೆರಳುತ್ತಿದ್ದಂತೆ ಎದೆನೋವು ಉಲ್ಬಣಗೊಂಡಿದೆ. ಬಳಿಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ.