ಕುಂದಾನಗರಿ ಬೆಳಗಾವಿಯಲ್ಲಿ ನಡೆಯುತ್ತಿರುವ MES ಮಹಾಮೇಳವನ್ನು ವಿರೋಧಿಸಿ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ನಡೆಯುತ್ತಿರುವ MES ಮಹಾಮೇಳವನ್ನು ವಿರೋಧಿಸಿ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

 MES ಪದೇ ಪದೇ ಕನ್ನಡಿಗರ ಸ್ವಾಭಿಮಾನ ಕೆಣಕುತ್ತಿದೆ ಎಂದು ಆರೋಪಿಸಿ, ಟೈರ್​ಗೆ ಬೆಂಕಿ ಹಚ್ಚುವ ಮೂಲಕ ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತ ಪಡಿಸಿದರು.

ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಕೆಲಕಾಲ ಕರವೇ ಕಾರ್ಯಕರ್ತರ ನಡುವೆ ವಾಗ್ವಾದ ಸಹ ನಡೆಯಿತು. ಬಳಿಕ ಪೊಲೀಸರು ನೂರಾರು ಕರವೇ ಕಾರ್ಯಕರ್ತರನ್ನು ಬಂಧಿಸಿದರು.