Asianet Suvarna News Asianet Suvarna News

ಕುಮಾರಸ್ವಾಮಿ ಬಜೆಟ್‌ನಲ್ಲಿ ವಾಣಿಜ್ಯ ಮತ್ತು ಕೈಗಾರಿಕೆಗೆ ಏನೇನು?

ಸಿಎಂ ಕುಮಾರಸ್ವಾಮಿ ಇಂದು ಮಂಡಿಸಿರುವ ಬಜೆಟ್ ನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ವಿಭಾಗಕ್ಕೆ ಭರ್ಜರಿ ಕೊಡುಗೆ ನೀಡಿದ್ದಾರೆ. ಯಾವ ಯಾವ ಜಿಲ್ಲೆಗಳಿಗೆ ಆದ್ಯತೆ ನೀಡಿದ್ದಾರೆ ನೋಡಿಕೊಂಡು ಬನ್ನಿ

Karnataka Budget 2018 H. D. Kumaraswamy allocation for Commerce and Industry

ಬೆಂಗಳೂರು(ಜು.5): ಸಿಎಂ ಕುಮಾರಸ್ವಾಮಿ ಇಂದು ಮಂಡಿಸಿರುವ ಬಜೆಟ್ ನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ವಿಭಾಗಕ್ಕೆ ಭರ್ಜರಿ ಕೊಡುಗೆ ನೀಡಿದ್ದಾರೆ'.

ಕಲುಬುರ್ಗಿಯಲ್ಲಿ ಸೌರ ವಿದ್ಯುತ್ ಉತ್ಪಾದನೆ ಉಪಕರಣ ತಯಾರಿಕೆ ಘಟಕ ನಿರ್ಮಾಣಕ್ಕೆ ಬಜೆಟ್ ಒಪ್ಪಿಗೆ ನೀಡಿದೆ. ಜತೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಎಲ್​ಇಡಿ ಲೈಟ್ ಉತ್ಪಾದನಾ ಉದ್ಯಮ, ಸಿಎಂ ತವರು ಹಾಸನ ಜಿಲ್ಲೆಯಲ್ಲಿ ನೆಲಹಾಸು & ಸ್ಯಾನಿಟರಿ ಉತ್ಪಾದನಾ ಘಟಕ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ.

ಕೊಪ್ಪಳ ಜಿಲ್ಲೆಯಲ್ಲಿ ಆಟಿಕೆ ತಯಾರಿಕಾ ಕ್ಲಸ್ಟರ್ ಸ್ಥಾಪನೆ, ಮೈಸೂರು ಜಿಲ್ಲೆಯಲ್ಲಿ ICB ಚಿಪ್ ತಯಾರಿಸುವ ಸಂಸ್ಥೆ ಸ್ಥಾಪನೆ , ಬಳ್ಳಾರಿ ಜಿಲ್ಲೆಯಲ್ಲಿ ವಸ್ತ್ರ ಉದ್ಯಮಕ್ಕೆ ಒತ್ತು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮೊಬೈಲ್ ಬಿಡಿ ಘಟಕಗಳ ಉದ್ಯಮ, ತುಮಕೂರು ಜಿಲ್ಲೆಯಲ್ಲಿ ಫಿಟ್​ನೆಸ್ ವಸ್ತು ಉದ್ಯಮ ಸ್ಥಾಪನೆ, ಬೀದರ್ ಜಿಲ್ಲೆಯಲ್ಲಿ ಕೃಷಿ ಉತ್ಪನ್ನ ಸಂರಕ್ಷಣೆ ಯಂತ್ರ ಉತ್ಪಾದನಾ ಘಟಕ ಆರಂಭಿಸಲಾಗುತ್ತದೆ.

9 ಜಿಲ್ಲೆಗಳಲ್ಲಿ ಹೊಸ ಉದ್ಯಮ ಸ್ಥಾಪನೆಗೆ 2 ಸಾವಿರ ಕೋಟಿ ಬಂಡವಾಳ ಹೂಡಿಕೆಗೂ ಬಜೆಟ್ ತೀರ್ಮಾನ ಮಾಡಿದೆ. ಜೈವಿಕವಾಗಿ ಪರ್ಯಾಯ ಪ್ಯಾಕಿಂಗ್ ಸಂಸ್ಥೆ ತೆರೆಯಲು 5 ಕೋಟಿ ರೂ. ಮೀಸಲಿಡಲಾಗಿದೆ.ಬೀದರ್ ನಲ್ಲಿ  ಕೃಷಿ ಉಪಕರಣಗಳ ತಯಾರಿಕೆಗಾಗಿ 2000 ಕೋಟಿ ರು ಬಂಡವಾಳ ಹೂಡಿಕೆ. ಮುಂಬರುವ ವರ್ಷಗಳಲ್ಲಿ ರಾಜ್ಯದ 7 ಜಿಲ್ಲೆಗಳಲ್ಲಿ 14 ಸಾವಿರ ಕೋಟಿ ರು ಬಂಡವಾಳ ಹೂಡಿ  8 ಲಕ್ಷ ಉದ್ಯೋಗ ಸೃಷ್ಟಿಸಲಾಗುವುದು ಎಂದು ಕುಮಾರಸ್ವಾಮಿ ಬಜೆಟ್ ನಲ್ಲಿ ತಿಳಿಸಿದ್ದಾರೆ.

Follow Us:
Download App:
  • android
  • ios