Asianet Suvarna News Asianet Suvarna News

ರಾಜಭವನದಲ್ಲಿ ಪ್ರಮಾಣ ವಚನ: ಸಿಎಂ ಯಡಿಯೂರಪ್ಪ ಸಂಪುಟ ಸೇರಿದ ಸಚಿವರಿವರು!

ಬಿ. ಎಸ್ ಯಡಿಯೂರಪ್ಪ ಸಂಪುಟಕ್ಕೆ 17 ಸಚಿವರು ಸೇರ್ಪಡೆ| ಅಳೆದು, ತೂಗಿ ಸಿದ್ಧಪಡಿಸಿರುವ ಪಟ್ಟಿಯಲ್ಲಿ ಯಾರಿಗೆಲ್ಲ ಮಂತ್ರಿ ಪಟ್ಟ| ರಾಜಭವನದಲ್ಲಿ ಅದ್ಧೂರಿ ಪ್ರಮಾಣವಚನ ಕಾರ್ಯಕ್ರಮ!

Karnataka Cabinet Expansion 17 BJP MLAs Takes Oath As Ministers
Author
Bangalore, First Published Aug 20, 2019, 11:30 AM IST

ಬೆಂಗಳೂರು[ಆ.20]: ಬಿ. ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಒಂದು ತಿಂಗಳ ಬಳಿಕ ಕೊನೆಗೂ ಸಂಪುಟ ವಿಸ್ತರಣೆಯಾಗಿದೆ. 17 ಮಂದಿ ಶಾಸಕರು ಮೊದಲ ಹಂತದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅಳೆದು, ತೂಗಿ ಸಿದ್ಧಪಡಿಸಿರುವ ಈ ಪಟ್ಟಿಯಲ್ಲಿ ಅಚ್ಚರಿಯ ಹೆಸರುಗಳು ಕಂಡು ಬಂದಿವೆ. ಕೊನೆಯ ಕ್ಷಣದವರೆಗೆ ಸಚಿವರು ಯಾರಾಗ್ತಾರೆ? ಎಂಬುವುದಕ್ಕೆ ಉತ್ತರ ಬಹಳಷ್ಟು ರಹಸ್ಯವಾಗಿತ್ತು. ಆದರೀಗ ಈ ಎಲ್ಲಾ ಕುತೂಹಲಗಳಿಗೆ ತೆರೆ ಬಿದ್ದಿದ್ದು, ಸಚಿವರು ರಾಜಭವನದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. 

ಕರ್ನಾಟಕ ಸಚಿವ ಸಂಪುಟಕ್ಕೆ ಸಂಬಂಧಿಸಿದ ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

*ಗೋವಿಂದ ಕಾರಜೋಳ - ಮುಧೋಳ - ದಲಿತ ಎಡ

*ಡಾ.ಸಿ.ಎನ್.ಅಶ್ವತ್ಥ್ ನಾರಾಯಣ - ಮಲ್ಲೇಶ್ವರಂ - ಒಕ್ಕಲಿಗ

*ಲಕ್ಷ್ಮಣ್ ಸವದಿ - ಲಿಂಗಾಯತ

*ಕೆ.ಎಸ್.ಈಶ್ವರಪ್ಪ - ಶಿವಮೊಗ್ಗ ನಗರ - ಕುರುಬ

*ಆರ್.ಅಶೋಕ್ - ಪದ್ಮನಾಭನಗರ - ಒಕ್ಕಲಿಗ

*ಜಗದೀಶ್ ಶೆಟ್ಟರ್ - ಹುಬ್ಬಳ್ಳಿ-ಧಾರವಾಡ ಕೇಂದ್ರ - ಲಿಂಗಾಯತ

*ಬಿ.ಶ್ರೀರಾಮುಲು - ಮೊಳಕಾಲ್ಮೂರು - ವಾಲ್ಮೀಕಿ

*ಎಸ್.ಸುರೇಶ್ ಕುಮಾರ್ - ರಾಜಾಜಿನಗರ - ಬ್ರಾಹ್ಮಣ

*ವಿ.ಸೋಮಣ್ಣ - ಗೋವಿಂದರಾಜನಗರ - ಲಿಂಗಾಯತ

*ಸಿ.ಟಿ.ರವಿ - ಚಿಕ್ಕಮಗಳೂರು - ಒಕ್ಕಲಿಗ

*ಬಸವರಾಜ್ ಬೊಮ್ಮಾಯಿ - ಶಿಗ್ಗಾಂವಿ - ಲಿಂಗಾಯತ 

*ಕೋಟ ಶ್ರೀನಿವಾಸ್ ಪೂಜಾರಿ - ಎಂಎಲ್ ಸಿ - ಈಡಿಗ 

*ಜೆ.ಸಿ.ಮಾಧುಸ್ವಾಮಿ - ಚಿಕ್ಕನಾಯಕನಹಳ್ಳಿ - ಲಿಂಗಾಯತ

*ಸಿ.ಸಿ.ಪಾಟೀಲ್ - ನರಗುಂದ - ಲಿಂಗಾಯತ

*ಎಚ್.ನಾಗೇಶ್ - ಮುಳಬಾಗಿಲು - ದಲಿತ ಎಡ

*ಪ್ರಭು ಚೌಹಾಣ್ - ಔರಾದ್ - ಲಂಬಾಣಿ

*ಶಶಿಕಲಾ ಜೊಲ್ಲೆ - ನಿಪ್ಪಾಣಿ - ಪಂಚಮಸಾಲಿ ಲಿಂಗಾಯತ

Follow Us:
Download App:
  • android
  • ios