Asianet Suvarna News Asianet Suvarna News

ವಿಶ್ವಾಸಮತ ಗೆದ್ದ ಯಡಿಯೂರಪ್ಪ: ಧ್ವನಿಮತದ ಮೂಲಕ ಅಂಗೀಕಾರ

ವಿಶ್ವಾಸಮತ ಗೆದ್ದ ಯಡಿಯೂರಪ್ಪ| ಧ್ವನಿಮತದ ಮೂಲಕ ಅಗ್ನಿಪರೀಕ್ಷೆಯಲ್ಲಿ ಬಿಎಸ್‌ವೈ ಪಾಸ್| ಹಣಕಾಸು ಮಸೂದೆಯೂ ಅಂಗೀಕಾರ

Karnataka Chief Minister BS Yediyurappa Succeeds In Floor Test
Author
Bangalore, First Published Jul 29, 2019, 12:07 PM IST

ಬೆಂಗಳೂರು[ಜು.29]: ಎಚ್. ಡಿ. ಕುಮಾರಸ್ವಾಮಿ ಬಹುಮತ ಸಾಬೀತುಪಡಿಸುವಲ್ಲಿ ವಿಫಲಗೊಂಡಿದ್ದು ಇದರ ಬೆನ್ನಲ್ಲೇ ಮೈತ್ರಿ ಸರ್ಕಾರ ಪತನಗೊಂಡಿತ್ತು. ಬಳಿಕ ಶುಕ್ರವಾರದಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಬಿ. ಎಸ್. ಯಡಿಯೂರಪ್ಪ ಇಂದು ಸೋಮವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸಿದ್ದು, ಈ ಅಗ್ನಿಪರೀಕ್ಷೆಯಲ್ಲಿ ಗೆದ್ದಿದ್ದಾರೆ. ಈ ಪ್ರಕ್ರಿಯೆಯಲ್ಲಿ ಧ್ವನಿಮತದ ಮೂಲಕ ಅಂಗೀಕಾರ ಪಡೆದಿರುವ ಬಿಎಸ್‌ವೈ, ಹಣಕಾಸು ವಿಧೇಯಕವನ್ನೂ ಮಂಡಿಸಿದ್ದಾರೆ.

ಮೈತ್ರಿ ಸರ್ಕಾರದ ಹಣಕಾಸು ವಿಧೇಯಕವೇ ಮಂಡನೆ: ಬಿಎಸ್‌ವೈ

ವಿಶ್ವಾಸಮತ ಯಾಚನೆ ಪ್ರಕ್ರಿಯೆಗೂ ಮುನ್ನ ಮಾತನಾಡಿದ ಸಿಎಂ ಯಡಿಯೂರಪ್ಪ 'ನಾಡಿನ ಶಕ್ತಿ ದೇವತೆ ಚಾಮುಂಡೇಶ್ವರಿಗೆ ನಾನು ನಮಿಸುತ್ತೇನೆ, ಬಸವಾದಿ ಶರಣರ ಸ್ಮರಿಸುತ್ತೇನೆ. ಸಿದ್ದರಾಮಯ್ಯ, ಎಚ್ ಡಿಕೆ ಸೇಡಿನ ರಾಜಕಾರಣ ಮಾಡಿಲ್ಲ ಹೀಗಾಗಿ ನಾನೂ ಸಹ ಸೇಡಿನ ರಾಜಕಾರಣ ಮಾಡುವುದಿಲ್ಲ. ನಾಲ್ಕೈದು ತಿಂಗಳಲ್ಲಿ ಅಭಿವೃದ್ಧಿ ಗುರಿಯಿಟ್ಟುಕೊಂಡು ಕೆಲಸ ಮಾಡುತ್ತೇನೆ. ನನ್ನನ್ನು ವಿರೋಧ ಮಾಡಿದವರನ್ನೂ ಪ್ರೀತಿಯಿಂದ ಕಾಣುತ್ತೇನೆ. ನನ್ನಿಂದ ಏನಾದರೂ ತಪ್ಪಾದರೆ ಕೂಡಲೇ ನನ್ನನ್ನು ಎಚ್ಚರಿಸಿ, ಅದನ್ನು ಸರಿಪಡಿಸಿಕೊಳ್ಳುವ ಎಲ್ಲಾ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ' ಎಂದಿದ್ದಾರೆ.

ಬಳಿಕ ಮೈತ್ರಿ ಸರ್ಕಾರ ತಯಾರು ಮಾಡಿದ್ದ ಹಣಕಾಸು ಮಸೂದೆಯನ್ನು ಒಂದಕ್ಷರವೂ ಅಳಿಸದೆ ಮಂಡಿಸುತ್ತೇನೆ ಎಂದಿದ್ದ ಯಡಿಯೂರಪ್ಪ ತಮ್ಮ ಮಾತಿನಂತೆ ವಿಧಾನಸಭೆಯಲ್ಲಿ ಮಸೂದೆ ಮಂಡಿಸಿದ್ದಾರೆ. ಈ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರ ಪಡೆದಿದೆ.

Follow Us:
Download App:
  • android
  • ios