ಒಂದು ಕಡೆ ದೋಸ್ತಿ ಸರಕಾರವನ್ನು ಕಾಪಾಡಿಕೊಳ್ಳಲು ಖುದ್ದು ಅಖಾಡಕ್ಕೆ ಇಳಿದಿರುವ ಸಿಎಂ ಸಚಿವರಿಗೆ ಬುದ್ಧಿ ಮಾತು ಹೇಳುವ ಕೆಲಸವನ್ನು ಮಾಡುತ್ತಿದ್ದಾರೆ.

ಬೆಂಗಳೂರು[ಜೂ. 09]  ಸಮಸ್ಯೆ ಹೇಳಿಕೊಳ್ಳಲು ಬಂದ ಸಾರ್ವಜನಿಕರ ವಿರುದ್ಧ ಸಚಿವ ಡಿ.ಸಿ.ತಮ್ಮಣ್ಣ ಹರಿಹಾಯ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಚಾರ ಗಂಭೀರವಾಗಿ ಪರಿಗಣಿಸಿರುವ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಚಿವರಿಗೆ ಬುದ್ಧಿಮಾತು ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಭಾನುವಾರ ಟ್ವೀಟ್ ಮಾಡಿರುವ ಸಿಎಂ 'ನಾವೆಲ್ಲರೂ ಪಕ್ಷತೀತವಾಗಿ ಜನರ ರಾಜಕೀಯ ಒಲವನ್ನು ಪರಿಗಣಿಸದೆ ಒಟ್ಟಾಗಿ ಅಖಂಡ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಶ್ರಮಿಸೋಣ' ಎಂದಿದ್ದಾರೆ.

ತಮ್ಮಣ್ಣ ನಡೆ ಖಂಡಿಸಿ ಎದ್ದಿದ್ದ ವಿವಾದವನ್ನು ಈ ಮೂಲಕ ಸಿಎಂ ತಣ್ಣಗಾಗಿಸಲು ಮುಂದಾಗಿದ್ದಾರೆ. 

Scroll to load tweet…