HDK ಬಳಿ ಕಿವಿ ಹಿಂಡಿಸಿಕೊಂಡ ಆಪ್ತ ಸಚಿವ
ಒಂದು ಕಡೆ ದೋಸ್ತಿ ಸರಕಾರವನ್ನು ಕಾಪಾಡಿಕೊಳ್ಳಲು ಖುದ್ದು ಅಖಾಡಕ್ಕೆ ಇಳಿದಿರುವ ಸಿಎಂ ಸಚಿವರಿಗೆ ಬುದ್ಧಿ ಮಾತು ಹೇಳುವ ಕೆಲಸವನ್ನು ಮಾಡುತ್ತಿದ್ದಾರೆ.
ಬೆಂಗಳೂರು[ಜೂ. 09] ಸಮಸ್ಯೆ ಹೇಳಿಕೊಳ್ಳಲು ಬಂದ ಸಾರ್ವಜನಿಕರ ವಿರುದ್ಧ ಸಚಿವ ಡಿ.ಸಿ.ತಮ್ಮಣ್ಣ ಹರಿಹಾಯ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಚಾರ ಗಂಭೀರವಾಗಿ ಪರಿಗಣಿಸಿರುವ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಚಿವರಿಗೆ ಬುದ್ಧಿಮಾತು ಹೇಳಿದ್ದಾರೆ.
ಭಾನುವಾರ ಟ್ವೀಟ್ ಮಾಡಿರುವ ಸಿಎಂ 'ನಾವೆಲ್ಲರೂ ಪಕ್ಷತೀತವಾಗಿ ಜನರ ರಾಜಕೀಯ ಒಲವನ್ನು ಪರಿಗಣಿಸದೆ ಒಟ್ಟಾಗಿ ಅಖಂಡ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಶ್ರಮಿಸೋಣ' ಎಂದಿದ್ದಾರೆ.
ತಮ್ಮಣ್ಣ ನಡೆ ಖಂಡಿಸಿ ಎದ್ದಿದ್ದ ವಿವಾದವನ್ನು ಈ ಮೂಲಕ ಸಿಎಂ ತಣ್ಣಗಾಗಿಸಲು ಮುಂದಾಗಿದ್ದಾರೆ.
ಚುನಾವಣೆ ರಾಜಕೀಯವನ್ನು ಅಭಿವೃದ್ಧಿಯೊಂದಿಗೆ ಬೆರೆಸುವುದು ಸೂಕ್ತವಲ್ಲ. ಜನಪ್ರತಿನಿಧಿಗಳಾದ ಹಾಗೂ ಮಂತ್ರಿ ಮಂಡಲದಲ್ಲಿ ಸ್ಥಾನ ಪಡೆದಿರುವ ನಾವೆಲ್ಲರೂ ಪಕ್ಷಾತೀತವಾಗಿ ಜನರ ರಾಜಕೀಯ ಒಲವನ್ನು ಪರಿಗಣಿಸದೆ ಒಟ್ಟಾಗಿ ಅಖಂಡ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಶ್ರಮಿಸೋಣ. ಇದೇ ಪ್ರಜಾಪ್ರಭುತ್ವದ ಸತ್ವ - ಸಾರ!
— H D Kumaraswamy (@hd_kumaraswamy) June 9, 2019