ಒಮ್ಮೆ ಬಹುಮತ ಸಾಬೀತಾದರೆ, ಯಡಿಯೂರಪ್ಪ ಆರು ತಿಂಗಳು ನಿರಾಳ
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿಯಾಯಿತು. ಆದರೆ, ಬಹುಮತ ಸಾಬೀತು ಮಾಡುವ ಮುನ್ನ ಹಲವಾರು ಪ್ರಕ್ರಿಯೆಗಳನ್ನು ಮುಗಿಸಬೇಕು. ಇದರಲ್ಲಿ ರಾಜ್ಯಪಾಲರು ಹಾಗೂ ಹೊಸ ಮುಖ್ಯಮಂತ್ರಿಯ ಜವಾಬ್ದಾರಿಗಳೇನು?
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿಯಾಯಿತು. ಆದರೆ, ಬಹುಮತ ಸಾಬೀತು ಮಾಡುವ ಮುನ್ನ ಹಲವಾರು ಪ್ರಕ್ರಿಯೆಗಳನ್ನು ಮುಗಿಸಬೇಕು. ಇದರಲ್ಲಿ ರಾಜ್ಯಪಾಲರು ಹಾಗೂ ಹೊಸ ಮುಖ್ಯಮಂತ್ರಿಯ ಜವಾಬ್ದಾರಿಗಳೇನು?
- ರಾಜ್ಯಪಾಲರು ಸದನದ ಹಿರಿಯ ಸದಸ್ಯರೊಬ್ಬರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸುವರು.
- ಹಂಗಾಮಿ ಸ್ಪೀಕರ್ ಎಲ್ಲ ಹೊಸ ಚುನಾಯಿತ ಅಭ್ಯರ್ಥಿಗಳಿಗೆ ಪ್ರಮಾಣ ವಚನ ಬೋಧಿಸುವರು.
- ಹೊಸ ಸ್ಪೀಕರ್ ಆಯ್ಕೆ ಪ್ರಕ್ರಿಯೆಯನ್ನು ಹಂಗಾಮಿ ಸ್ಪೀಕರ್ ನಿರ್ವಹಿಸುವರು.
- ಹಂಗಾಮಿ ಸ್ಪೀಕರ್ಗೆ ವಿಶ್ವಾಸ ಮತ ಯಾಚನೆ ಕಲಾಪ ನಡೆಸುವ ಅಧಿಕಾರ ಇರುವುದಿಲ್ಲ.
- ಪ್ರಮಾಣ ವಚನ ಸ್ವೀಕಾರಕ್ಕೆ ಮೊದಲು ಅವರಿಗೆ ವಿಪ್ ನೀಡುವ ಅಧಿಕಾರ ಪಕ್ಷಕ್ಕೆ ಇರುವುದೇ? ಎಂಬುವುಜು ಈಗ ಚರ್ಚೆಯ ವಿಷಯವಾಗುತ್ತಿದೆ.
- ಚುನಾಯಿತ ಅಭ್ಯರ್ಥಿಯು ಪ್ರಮಾಣ ವಚನ ಸ್ವೀಕರಿಸಿದ ನಂತರವಷ್ಟೇ ಅಧಿಕೃತ ಶಾಸಕರಾಗುತ್ತಾರೆ.
- ಆಯ್ಕೆಯಾಗುವ ಹೊಸ ಸ್ಪೀಕರ್ ಅವರಿಂದಲೇ ವಿಶ್ವಾಸ ಮತ ಯಾಚನೆಯ ಪ್ರಕ್ರಿಯೆ ನಡೆಯಬೇಕು.
- ಒಂದು ವೇಳೆ ಹೊಸ ಸ್ಪೀಕರ್ ಆಯ್ಕೆಯಲ್ಲೇ ಬಿಜೆಪಿಗೆ ಹಿನ್ನಡೆಯಾದರೆ, ವಿಶ್ವಾಸ ಮತದಲ್ಲೂ ಹಿನ್ನಡೆಯಾದಂತೆ.
- ಸದನದಲ್ಲಿ ಹಾಜರಿರುವ ಒಟ್ಟು ಶಾಸಕರ ಸಂಖ್ಯೆಯಲ್ಲಿ ಅರ್ಧಕ್ಕಿಂತ ಒಂದು ಜಾಸ್ತಿ ಮತ ಬಿಎಸ್ವೈಗೆ ಸಿಕ್ಕರೂ, ಬಿಎಸ್ವೈ ಸರ್ಕಾರಕ್ಕೆ ಬಹುಮತ ಸಿಕ್ಕಂತೆ
- ಒಮ್ಮೆ ಬಹುಮತ ಸಿಕ್ಕರೆ 6 ತಿಂಗಳವರೆಗೆ ಬಹುಮತ ಸಾಬೀತು ಮಾಡಬೇಕಾಗಿಲ್ಲ.
ಐಪಿಎಲ್ ಆಟಗಾರರ ರೀತಿ ಶಾಸಕರ ಹರಾಜು
ಬಿಎಸ್ವೈ ಅಧಿಕಾರ ಸ್ವೀಕರಿಸಿದ ನಾಲ್ಕು ಗಂಟೆಯಲ್ಲೇ ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಹೊಸ ಅಭಿಯಾನಕ್ಕೆ ಪ್ರಕಾಶ್ ರೈ ಚಾಲನೆ