ದೋಸ್ತಿ ಸರ್ಕಾರಕ್ಕೆ ’ಲಕ್ಷ್ಮೀ’ ಕಂಟಕ: ಇಲ್ಲಿದೆ ಕಿತ್ತಾಟದ ಹಿಂದಿನ ಅಸಲಿ ಕಹಾನಿ!
ರಾಜ್ಯ ಸರ್ಕಾರದ ಬುಡ ಅಲುಗಾಡಿಸುವಂತೆ ನಡೆದಿರುವ ಬೆಳಗಾವಿ ಕಾಂಗ್ರೆಸ್ ನಾಯಕರ ಮೇಲಾಟ ಕೇವಲ ತಾಲೂಕು ಮಟ್ಟದ ಪ್ರಾಥಮಿಕ ಭೂ ಅಭಿವೃದ್ಧಿ ಬ್ಯಾಂಕ್ನ ಚುನಾವಣೆಯಲ್ಲಿ ಅಧಿಕಾರ ಹಿಡಿಯುವ ಕಾರಣಕ್ಕಷ್ಟೇ ನಡೆದ ಸಂಘರ್ಷವಲ್ಲ. ಯಾವುದೇ ಸರ್ಕಾರವಿದ್ದರೂ ಬೆಳಗಾವಿ ಜಿಲ್ಲಾ ರಾಜಕಾರಣವನ್ನು ಹತೋಟಿಗೆ ತೆಗೆದುಕೊಳ್ಳುವ ನಾಯಕ ಸಮುದಾಯದ ಜಾರಕಿಹೊಳಿ ಸಹೋದರರ ಪ್ರಾಬಲ್ಯ ಮಣಿಸಲು ಪಕ್ಷಭೇದ ಮರೆತ ಬೆಳಗಾವಿ ಲಿಂಗಾಯತ ಹಾಗೂ ಮರಾಠ ಸಮುದಾಯಗಳ ನಾಯಕರು ಒಗ್ಗೂಡಿರುವುದರ ಸಂಕೇತ ಎಂದೂ ವ್ಯಾಖ್ಯಾನಿಸಲಾಗುತ್ತಿದೆ.
ರಾಜ್ಯ ಸರ್ಕಾರದ ಬುಡ ಅಲುಗಾಡಿಸುವಂತೆ ನಡೆದಿರುವ ಬೆಳಗಾವಿ ಕಾಂಗ್ರೆಸ್ ನಾಯಕರ ಮೇಲಾಟ ಕೇವಲ ತಾಲೂಕು ಮಟ್ಟದ ಪ್ರಾಥಮಿಕ ಭೂ ಅಭಿವೃದ್ಧಿ ಬ್ಯಾಂಕ್ನ ಚುನಾವಣೆಯಲ್ಲಿ ಅಧಿಕಾರ ಹಿಡಿಯುವ ಕಾರಣಕ್ಕಷ್ಟೇ ನಡೆದ ಸಂಘರ್ಷವಲ್ಲ. ಯಾವುದೇ ಸರ್ಕಾರವಿದ್ದರೂ ಬೆಳಗಾವಿ ಜಿಲ್ಲಾ ರಾಜಕಾರಣವನ್ನು ಹತೋಟಿಗೆ ತೆಗೆದುಕೊಳ್ಳುವ ನಾಯಕ ಸಮುದಾಯದ ಜಾರಕಿಹೊಳಿ ಸಹೋದರರ ಪ್ರಾಬಲ್ಯ ಮಣಿಸಲು ಪಕ್ಷಭೇದ ಮರೆತ ಬೆಳಗಾವಿ ಲಿಂಗಾಯತ ಹಾಗೂ ಮರಾಠ ಸಮುದಾಯಗಳ ನಾಯಕರು ಒಗ್ಗೂಡಿರುವುದರ ಸಂಕೇತ ಎಂದೂ ವ್ಯಾಖ್ಯಾನಿಸಲಾಗುತ್ತಿದೆ.