ಪ್ರವಾಹ ಪರಿಸ್ಥಿತಿಯನ್ನು ನಿರ್ವಹಿಸಲು, ಪರಿಹಾರ ಕಾರ್ಯಗಳಿಗೆ ಹಾಗೂ ನೆರೆ ಸಂತ್ರಸ್ತರಿಗೆ ಬಟ್ಟೆ, ಮತ್ತಿತರ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರ ಒಟ್ಟು 195 ಕೋಟಿ ರು. ಅನುದಾನ ಬಿಡುಗಡೆ ಮಾಡಿದೆ.

ಬೆಂಗಳೂರು (ಆ. 20): ಪ್ರವಾಹ ಪರಿಸ್ಥಿತಿಯನ್ನು ನಿರ್ವಹಿಸಲು, ಪರಿಹಾರ ಕಾರ್ಯಗಳಿಗೆ ಹಾಗೂ ನೆರೆ ಸಂತ್ರಸ್ತರಿಗೆ ಬಟ್ಟೆ, ಮತ್ತಿತರ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರ ಒಟ್ಟು 195 ಕೋಟಿ ರು. ಅನುದಾನ ಬಿಡುಗಡೆ ಮಾಡಿದೆ.

Add Asianetnews Kannada as a Preferred SourcegooglePreferred

ರಾಜ್ಯದಲ್ಲಿ ಪ್ರವಾಹ ಪೀಡಿತ ತಾಲ್ಲೂಕುಗಳಲ್ಲಿ ಸಂತ್ರಸ್ತರಿಗೆ ಬಟ್ಟೆಬರೆ ಹಾಗೂ ದಿನ ಬಳಕೆಯ ವಸ್ತುಗಳಿಗಾಗಿ ಪ್ರತಿ ಕುಟುಂಬಕ್ಕೆ 10 ಸಾವಿರ ರು. ಗಳಂತೆ ವಿತರಿಸಲು ರಾಜ್ಯ ವಿಪತ್ತು ನಿರ್ವಹಣಾ ನಿಧಿಯಡಿ ರಾಜ್ಯ ಸರ್ಕಾರದ ಹೆಚ್ಚುವರಿ ಪಾಲಿನ ಅನುದಾನದಿಂದ 80 ಕೋಟಿ ರು. ಅನುದಾನ ಮಂಜೂರು ಮಾಡಲಾಗಿದೆ.

ಅಲ್ಲದೆ, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಉಂಟಾಗಿರುವ ನೆರೆ ಪರಿಸ್ಥಿತಿಯನ್ನು ನಿರ್ವಹಿಸಲು ಮತ್ತು ಪರಿಹಾರ ಕಾರ್ಯಗಳಿಗಾಗಿ ಸರ್ಕಾರವು 115 ಕೋಟಿ ರು. ಅನುದಾನವನ್ನು ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.