ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಸಾಮಾಜಿಕ ಜಾಲತಾಣದಲ್ಲಿ ಇತ್ತೀಚೆಗೆ ಫುಲ್ ಆಕ್ಟೀವ್ ಆಗಿದ್ದಾರೆ. ತಮ್ಮ ವ್ಯಂಗ್ಯ ಮತ್ತು ವಿಡಂಬನಾತ್ಮಕ ಟ್ವೀಟ್ ಗಳ ಮುಖೇನ ದೋಸ್ತಿ ಸರ್ಕಾರದ ನಾಯಕರ ಕಾಲೆಳೆಯುತ್ತಿದ್ದಾರೆ.

ಬೆಂಗಳೂರು[ಜು. 21] 'ನಾಳೆ ಮತ್ತೆ ಸದನದಲ್ಲಿ ಚಂದ್ರಗುಪ್ತ ಮೌರ್ಯನ ಕಾಲದಿಂದ ಇವತ್ತಿನ ತನಕ ಕಥೆ ಹೇಳಿ ಸದನದ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಬಾರದು ಎಂದು ಎಲ್ಲಾ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರಲ್ಲೂ ಮತ್ತು ಮೇಧಾವಿಗಳಾದ ಸಮನ್ವಯ ಸಮಿತಿ ಅಧ್ಯಕ್ಷರಲ್ಲೂ ನನ್ನ ಕಳಕಳಿಯ ವಿನಂತಿ’ 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೀಗೆ ಟ್ವೀಟ್ ಮಾಡಿರುವುದು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ. ಈ ರೀತಿ ಹೇಳುವ ಮೂಲಕ ನಾಳಿನ ಅಂದರೆ ಸೋಮವಾರದ ಅಧಿವೇಶನದಲ್ಲಿ ಕಾಲಹರಣ ಮಾಡಬೇಡಿ ಎಂದು ಕೇಳಿಕೊಂಡಿದ್ದಾರೆ.

ಫೆವಿಕಾಲ್ ಕಂಪನಿಗೆ ಆಪದ್ಭಾಂಧವ ಅಂಬಾಸಿಡರ್ ಹುಡುಕಿದ ಈಶ್ವರಪ್ಪ

ಶುಕ್ರವಾರವೂ ವಿಶ್ವಾಸಮತ ಸಾಬೀತು ಮಾಡುವ ಪ್ರಕ್ರಿಯೆ ನಡೆಯಲಿಲ್ಲ. ವಿಶ್ವಾಸಮತದ ಮೇಲಿನ ಚರ್ಚೆ ಪೂರ್ಣಗೊಳ್ಳದ ಕಾರಣ ಸ್ಪೀಕರ್ ರಮೇಶ್ ಕುಮಾರ್ ಸದನವನ್ನು ಸೋಮವಾರಕ್ಕೆ ಮುಂದೂಡಿದ್ದರು.

ಶುಕ್ರವಾರ ಟ್ವೀಟ್ ಮಾಡಿದ್ದ ಕೆಎಸ್ಇ "ಫೆವಿಕಾಲ್ ಕಂಪನಿಯವರು ಬ್ರಾಂಡ್ ಅಂಬಾಸಿಡರ್ ಹುಡುಕಾಟದಲ್ಲಿ ಇದ್ದಾಗ ಆಪದ್ಭಾಂಧವರಾಗಿ ಸಿಕ್ಕಿದ್ದು ನಮ್ಮ ಮುಖ್ಯಮಂತ್ರಿಗಳು" ಎಂದು ವ್ಯಂಗ್ಯದ ಏಟು ನೀಡಿದ್ದರು. 

Scroll to load tweet…