ಶುಕ್ರವಾರ ನಡೆಯಬೇಕಿದ್ದ ವಿಶ್ವಾಸಮತ ಯಾಚನೆ ಮುಂದೂಡಿಕೆಯಾಗಿದೆ. ಕರ್ನಾಟಕ ರಾಜಕೀಯ ಪ್ರಹಸನ ಮುಂದುವರಿದಿದೆ. ಈ ವೇಳೆ ಬಿಜೆಪಿ ಮುಂದಿರುವ ಆಯ್ಕೆಗಳೇನು? 

ಬೆಂಗಳೂರು [ಜು.20] : ಶನಿವಾರ ನಿಗದಿತ ಅವಧಿಯೊಳಗೆ ಬಹುಮತ ಸಾಬೀತು ಪಡಿಸುವಂತೆ ರಾಜ್ಯಪಾಲ ವಜೂಭಾಯಿ ವಾಲಾ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಎರಡೆರಡು ಬಾರಿ ನಿರ್ದೇಶನ ನೀಡಿದ ಹೊರತಾಗ್ಯೂ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಕಲಾಪವನ್ನು ಸೋಮ ವಾರಕ್ಕೆ ಮುಂದೂಡಿದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

1ಸೋಮವಾರಕ್ಕೆ ಕಲಾಪ ಮುಂದೂಡಿಕೆ ಆಗಿರುವುದರಿಂದ ಆ ದಿನದ ವರೆಗೂ ತಾಳ್ಮೆಯಿಂದ ಕಾದು ನೋಡಬಹುದು

2 ಬಹುಮತ ಸಾಬೀತಿಗೆ 2 ಬಾರಿ ನೀಡಿದ ಆದೇಶವನ್ನೂ ಲೆಕ್ಕಿಸದ ಬಗ್ಗೆ ಮತ್ತೆ ರಾಜ್ಯಪಾಲರ ಮೊರೆ ಹೋಗಬಹುದು

3 ರಾಜ್ಯಪಾಲರ ಆದೇಶವನ್ನೂ ಸರ್ಕಾರ ಪಾಲಿಸುತ್ತಿಲ್ಲ ಎಂದು ದೂರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಬಹುದು

4 ಮುಖ್ಯಮಂತ್ರಿಗಳ ನಡೆಯನ್ನು ವಿರೋಧಿಸಿ ಇನ್ನೆರಡು ದಿನಗಳ ಕಾಲ ಪ್ರತಿಭಟನೆ, ಧರಣಿ ಆಯೋಜಿಸಬಹುದು