Asianet Suvarna News Asianet Suvarna News

ಈಗ ರಾಜ್ಯಪಾಲರ ಆಟ ಶುರು!: ಮೈತ್ರಿ ಪ್ಲಾನ್‌ಗೆ ಗೌರ್ನರ್‌ ಬ್ರೇಕ್‌?

ಮೈತ್ರಿ ಪ್ಲಾನ್‌ಗೆ ಗೌರ್ನರ್‌ ಬ್ರೇಕ್‌?| ವಿಧಾನಸಭೆ ವಿಸರ್ಜನೆಗೆ ಒಪ್ಪಿಗೆ ನೀಡದಿರುವ ಸಾಧ್ಯತೆ ಹೆಚ್ಚು| ಅಧಿವೇಶನ ಮುಂದೂಡುವ ಪ್ರಯತ್ನಕ್ಕೂ ತಡೆ ಹಾಕುವ ಸಾಧ್ಯತೆ

Karnataka Governor Vajubhai Vala May Stop The Dissolvement Of Government
Author
Bangalore, First Published Jul 7, 2019, 8:10 AM IST

ಬೆಂಗಳೂರು[ಜು.07]: ಮೈತ್ರಿ ಸರ್ಕಾರ ಉರುಳಿಸುವ ಅತೃಪ್ತ ಶಾಸಕರ ತಂತ್ರವನ್ನು ಮಣಿಸಲು ವಿಧಾನಸಭೆ ವಿಸರ್ಜಿಸುವ ಹಾಗೂ ಅತೃಪ್ತರ ಮನವೊಲಿಸಲು ವಿಧಾನಮಂಡಲ ಅಧಿವೇಶನ ಮುಂದೂಡುವ ಮೈತ್ರಿಕೂಟದ ನಾಯಕರ ಪ್ರಯತ್ನಗಳಿಗೆ ರಾಜ್ಯಪಾಲರು ಕ್ಯಾರೆ ಎನ್ನದಿರುವ ಸಾಧ್ಯತೆಯೇ ಹೆಚ್ಚು ಎಂದು ಕಾನೂನು ತಜ್ಞರು ಹೇಳುತ್ತಾರೆ.

ಮೈತ್ರಿ ಸರ್ಕಾರವು ಸಚಿವ ಸಂಪುಟ ಸಭೆ ನಡೆಸಿ ವಿಧಾನಸಭೆ ವಿಸರ್ಜನೆಗೆ ಶಿಫಾರಸು ಮಾಡಿದರೂ ಅದನ್ನು ರಾಜ್ಯಪಾಲರು ತಿರಸ್ಕರಿಸಲು ಅವಕಾಶವಿದೆ ಎನ್ನಲಾಗಿದೆ. ಏಕೆಂದರೆ, ಈಗಾಗಲೇ 13 ಶಾಸಕರು ರಾಜೀನಾಮೆ ನೀಡಿರುವುದರಿಂದ ಸರ್ಕಾರ ಬಹುಮತ ಹೊಂದಿದೆಯೇ ಎಂಬುದು ಶಂಕಾಸ್ಪದವಾಗಿದೆ. ಅಲ್ಪಮತದಲ್ಲಿರುವ ಸರ್ಕಾರ ವಿಧಾನಸಭೆ ವಿಸರ್ಜನೆಗೆ ಶಿಫಾರಸು ಮಾಡುವ ಅಧಿಕಾರ ಹೊಂದಿಲ್ಲ ಎಂಬ ಕಾರಣ ನೀಡಿ ಈ ಶಿಫಾರಸನ್ನು ರಾಜ್ಯಪಾಲರು ತಳ್ಳಿಹಾಕಲು ಅವಕಾಶವಿದೆ.

ಅದೇ ರೀತಿ ಅತೃಪ್ತ ಶಾಸಕರ ಮನವೊಲಿಸಲು ಸಮಯಾವಕಾಶ ಪಡೆದುಕೊಳ್ಳಲು ಜೂ.12ರಿಂದ ಆಯೋಜಿಸಲು ಉದ್ದೇಶಿಸಲಾಗಿರುವ ವಿಧಾನಮಂಡಲ ಅಧಿವೇಶನವನ್ನು ಮುಂದೂಡುವ ಸಾಧ್ಯತೆಯನ್ನು ಮೈತ್ರಿಕೂಟ ಅವಲೋಕಿಸುತ್ತಿದೆ. ಆದರೆ, ಶಾಸಕರ ರಾಜೀನಾಮೆಯಿಂದಾಗಿ ಸರ್ಕಾರ ಅಲ್ಪಮತಕ್ಕೆ ಕುಸಿದಿರುವುದರಿಂದ ಈ ಕೂಡಲೇ ವಿಶ್ವಾಸ ಮತ ಸಾಬೀತುಪಡಿಸಿ ಎಂದು ರಾಜ್ಯಪಾಲರು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಸೂಚಿಸುವ ಅವಕಾಶವಿದೆ. ತನ್ಮೂಲಕ ವಿಧಾನಮಂಡಲ ಅಧಿವೇಶನ ಮುಂದೂಡುವ ಮೂಲಕ ಅತೃಪ್ತರ ಮನವೊಲಿಕೆಗೆ ಸಮಯಾವಕಾಶ ಪಡೆಯುವ ಮೈತ್ರಿಕೂಟದ ಆಸೆಗೆ ತಣ್ಣೀರೆರಚಬಹುದು.

Follow Us:
Download App:
  • android
  • ios