ನಾಡಹಬ್ಬ ದಸರಾ ಹಬ್ಬ ಆಚರಣೆ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಮಂತ್ರಿಯನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮೈಸೂರು, [ಆ.22]: ನೂತನ ಸಚಿವ ವಿ. ಸೋಮಣ್ಣ ಅವರನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದಸರಾ ಹಬ್ಬ ಆಚರಣೆ ಹಿನ್ನೆಲೆಯಲ್ಲಿ ಕೇವಲ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸಿ ರಾಜ್ಯ ಸರ್ಕಾರ ಇಂದು [ಗುರುವಾರ] ಆದೇಶ ಹೊರಡಿಸಿದೆ.

ಪೂಜೆ ಮಾಡುವುದಲ್ಲಿ ಬಿಜೆಪಿ ನಾಯಕರ ಪ್ರತಿಷ್ಠೆ: ಮೈಸೂರು DC ತಲೆದಂಡ!

ಈ ಬಾರಿ ಮೈಸೂರು ದಸರಾವನ್ನು ಅದ್ಧೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ದಸರಾ ಸಿದ್ಧತೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ಅವಶ್ಯಕತೆ ಇರುವುದರಿಂದ ರಾಜ್ಯ ಸರ್ಕಾರ ಕೇವಲ ಮೈಸುರು ಜಿಲ್ಲಾ ಉಸ್ತುವಾರಿ ಮಂತ್ರಿಯನ್ನು ನೇಮಕ ಮಾಡಿದೆ.

ಬಿಜೆಪಿ ನಾಯಕರುಗಳ ನಡುವೆಯೇ ಭಿನ್ನಾಭಿಪ್ರಾಯ ಎದ್ದು ಕಂಡಿತು. ಈ ಹಿನ್ನೆಲೆಯಲ್ಲಿ ಸೋಮಣ್ಣ ಅವರನ್ನು ಮೈಸೂರು ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ.

ವಿ. ಸೋಮಣ್ಣ ಅವರು ಬೆಂಗಳೂರಿನ ಗೋವಿಂದರಾಜ್ ನಗರ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದು, ಮೊನ್ನೇ ಬಿಎಸ್ ವೈ ಸಂಪುಟದ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು.