ಸರ್ಕಾರದ ವಿಶ್ವಾಸ ಮತ ಪ್ರಕ್ರಿಯೆ ನಡೆಯುವ ಹಿನ್ನೆಲೆ ವಿಧಾನಸೌಧದ ಸುತ್ತಮುತ್ತಲ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. 

ಬೆಂಗಳೂರು [ಜು.28] :  ನೂತನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಸರ್ಕಾರದ ವಿಶ್ವಾಸಮತ ಯಾಚನೆ ಅಂಗವಾಗಿ ವಿಧಾನಮಂಡಲದ ಅಧಿವೇಶನ ನಡೆಯುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೋಮವಾರ ಮತ್ತು ಮಂಗಳವಾರ ವಿಧಾನಸೌಧ ಸುತ್ತಮುತ್ತ ಎರಡು ಕಿ.ಮೀ ವ್ಯಾಪ್ತಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿಧಾನಮಂಡಲದ ಅಧಿವೇಶನದ ವೇಳೆ ಕೆಲವು ರಾಜಕೀಯ ಪಕ್ಷಗಳು ಹಾಗೂ ಸಂಘಟನೆಗಳು ಸಹ ಪ್ರತಿಭಟನೆ ನಡೆಸಬಹುದು. ಈ ಹಿನ್ನೆಲೆಯಲ್ಲಿ ಅಧಿವೇಶನದ ಸಂದರ್ಭದಲ್ಲಿ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. 

ಹೀಗಾಗಿ ವಿಧಾನಸೌಧ ವ್ಯಾಪ್ತಿ ಜು.29ರಿಂದ ಬೆಳಗ್ಗೆ 6 ಗಂಟೆಯಿಂದ 30 ಸಂಜೆ 6 ಗಂಟೆವರೆಗೆ ಸೆಕ್ಷನ್‌ 144 ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಅಲೋಕ್‌ ಕುಮಾರ್‌ ಪ್ರಕಟಣೆಯಲ್ಲಿ ಹೇಳಿದ್ದಾರೆ.