ಸರ್ಕಾರದ ವಿಶ್ವಾಸ ಮತ ಪ್ರಕ್ರಿಯೆ ನಡೆಯುವ ಹಿನ್ನೆಲೆ ವಿಧಾನಸೌಧದ ಸುತ್ತಮುತ್ತಲ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. 

ಬೆಂಗಳೂರು [ಜು.28] :  ನೂತನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಸರ್ಕಾರದ ವಿಶ್ವಾಸಮತ ಯಾಚನೆ ಅಂಗವಾಗಿ ವಿಧಾನಮಂಡಲದ ಅಧಿವೇಶನ ನಡೆಯುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೋಮವಾರ ಮತ್ತು ಮಂಗಳವಾರ ವಿಧಾನಸೌಧ ಸುತ್ತಮುತ್ತ ಎರಡು ಕಿ.ಮೀ ವ್ಯಾಪ್ತಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

Add Asianetnews Kannada as a Preferred SourcegooglePreferred

ವಿಧಾನಮಂಡಲದ ಅಧಿವೇಶನದ ವೇಳೆ ಕೆಲವು ರಾಜಕೀಯ ಪಕ್ಷಗಳು ಹಾಗೂ ಸಂಘಟನೆಗಳು ಸಹ ಪ್ರತಿಭಟನೆ ನಡೆಸಬಹುದು. ಈ ಹಿನ್ನೆಲೆಯಲ್ಲಿ ಅಧಿವೇಶನದ ಸಂದರ್ಭದಲ್ಲಿ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. 

ಹೀಗಾಗಿ ವಿಧಾನಸೌಧ ವ್ಯಾಪ್ತಿ ಜು.29ರಿಂದ ಬೆಳಗ್ಗೆ 6 ಗಂಟೆಯಿಂದ 30 ಸಂಜೆ 6 ಗಂಟೆವರೆಗೆ ಸೆಕ್ಷನ್‌ 144 ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಅಲೋಕ್‌ ಕುಮಾರ್‌ ಪ್ರಕಟಣೆಯಲ್ಲಿ ಹೇಳಿದ್ದಾರೆ.