ಕಾಂಗ್ರೆಸ್ ಪಕ್ಷದ ಐದು ವರ್ಷಗಳ ಆಡಳಿತ ಅವಧಿಯ ಕೊನೆಯ ಬಜೆಟ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಣಿಯಾಗುತ್ತಿದ್ದು, ಫೆಬ್ರವರಿ 15 ಅಥವಾ 17ರಂದು ಬಜೆಟ್ ಮಂಡಿಸಲಿದ್ದಾರೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.

ಬೆಂಗಳೂರು: ಕಾಂಗ್ರೆಸ್ ಪಕ್ಷದ ಐದು ವರ್ಷಗಳ ಆಡಳಿತ ಅವಧಿಯ ಕೊನೆಯ ಬಜೆಟ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಣಿಯಾಗುತ್ತಿದ್ದು, ಫೆಬ್ರವರಿ 15 ಅಥವಾ 17ರಂದು ಬಜೆಟ್ ಮಂಡಿಸಲಿದ್ದಾರೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಜ.17ರಿಂದ ಫೆಬ್ರವರಿ 2ರವರೆಗೆ ಭಾನುವಾರ ಹೊರತುಪಡಿಸಿ 12 ದಿನಗಳ ಕಾಲ ಹಣಕಾಸು ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳು, ನಿಗಮ-ಮಂಡಳಿಗಳು, ಪ್ರಮುಖ ಸಂಘ-ಸಂಸ್ಥೆಗಳು, ರೈತ ಮುಖಂಡರು ಹಾಗೂ ಆರ್ಥಿಕ ತಜ್ಞರ ಜತೆ ಸರಣಿ ಸಮಾಲೋಚನಾ ಸಭೆಗಳನ್ನು ನಡೆಸಲಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈ ಬಾರಿಯ ಬಜೆಟ್ ಜನಪ್ರಿಯ ಬಜೆಟ್ ಆಗುವ ನಿರೀಕ್ಷೆ ಇದ್ದು, ಈ ಹಿನ್ನೆಲೆಯಲ್ಲಿ ಎಲ್ಲ ವಲಯಗಳ ಬೇಕು-ಬೇಡಿಕೆಗಳನ್ನು ಸಿಎಂ ಆಲಿಸಲಿದ್ದಾರೆ. ಇದೇ ವೇಳೆ ನ್ಯಾ.ಸದಾಶಿವ ಆಯೋಗದ ವರದಿಯ ಶಿಫಾರಸುಗಳ ಜಾರಿ, ಜಾತಿ ಸಮೀಕ್ಷೆಯನ್ನು ಪ್ರಕಟಿಸುವುದರಿಂದ ಆಗುವ ಸಾಧಕ- ಬಾಧಕಗಳು ಹಾಗೂ ರಾಜ್ಯ ಸರ್ಕಾರಿ ನೌಕರರ ಆರನೇ ವೇತನ ಆಯೋಗದ ಜಾರಿ ಕುರಿತಂತೆಯೂ ಮಹತ್ವದ ಚರ್ಚೆ ನಡೆಯಲಿದ್ದು, ನಿರಂತರ ಸಭೆಗಳನ್ನು ನಡೆಸಲಿದ್ದಾರೆ.