ಕೆಲ ಕಾಂಗ್ರೆಸ್ ಶಾಸಕರು ಕಾಂಗ್ರೆಸ್ ನಾಯಕ, ಗೃಹ ಸಚಿವ ಎಂ.ಬಿ.ಪಾಟೀಲ್ ಸಿಎಂ ಆಗಲಿ ಎಂದು ಹೇಳಿಕೆ ನೀಡಿದ್ದು ಸುದ್ದಿಯಾಗಿತ್ತು. ಇದೀಗ ಪಕ್ಕದ ರಾಜ್ಯದ ನಾಯಕರೊಬ್ಬರು ಪಾಟೀಲರ ಪರ ಬ್ಯಾಟ್ ಬೀಸಿದ್ದಾರೆ.

ವಿಜಯಪುರ(ಜೂ. 02)  ಈ ದುರ್ಗಾದೇವಿ ಎಂ.ಬಿ ಪಾಟೀಲರನ್ನು ಮುಖ್ಯಮಂತ್ರಿ ಮಾಡಲೆಂದು ಹಾರೈಸುತ್ತೇನೆ. ಜಿಲ್ಲೆಯಲ್ಲಿ ಎಂ.ಬಿ ಪಾಟೀಲರು ನೀರಾವರಿ ಕ್ಷೇತ್ರದಲ್ಲಿ ಅಮೋಘ ಸಾಧನೆ ಮಾಡಿದವರು. ಇವರು ಹೆಚ್ಚಿನ ಜನ ಸೇವೆ ಮಾಡಲು ಅವರಿಗೆ ದೇವಿ ಮುಖ್ಯಮಂತ್ರಿ ಮಾಡಲೆಂದು ದೇವಿ ಪ್ರಾರ್ಥಿಸುತ್ತೇನೆ ಎಂದು ಗೋವಾ ಸರ್ಕಾರದ ಉಪ ಸಭಾಪತಿ ಮೈಕಲ್ ಲೋಬೋ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ತಿಕೋಟಾ ತಾಲೂಕಿನ ಸೋಮದೇವರಹಟ್ಟಿ ತಾಂಡಾ ದುರ್ಗಾದೇವಿ ಜಾತ್ರಾ ಮಹೋತ್ಸವದಲ್ಲಿ ಮಾತನಾಡಿದ ಗೋವಾ ನಾಯಕ ಎಂ.ಬಿ ಪಾಟೀಲರು ರಾಜಕಾರಣದಲ್ಲಿ ಇನ್ನಷ್ಟು ಶಕ್ತಿ ಪಡೆದುಕೊಳ್ಳಲಿ ಎಂದು ಹಾರೈಸಿದರು.

‘ಸಮನ್ವಯ ಸಮಿತಿಯಲ್ಲಿ ತೀರ್ಮಾನವಾದರೆ ಸಿಎಂ ಬದಲಾವಣೆ’

ಗೃಹ ಸಚಿವ ಎಂ.ಬಿ ಪಾಟೀಲ ಮಾತನಾಡಿ, ಬಂಜಾರ ಸಮಾಜವು ಒಂದು ಶ್ರಮಜೀವಿ. ಇವರು ಬಸವಣ್ಣನವ ಕಾಯಕವನ್ನು ಬಂಜಾರ ಸಮಾಜವು ಪ್ರತಿಪಾದಿಸುತ್ತಿದೆ ಎಂದು ಬಣ್ಣಿಸಿದರು.

ತುಬಚಿ–ಬಬಲೇಶ್ವರ ಏತ ನೀರಾವರಿ ಯೋಜನೆ ಕೇವಲ 15 ದಿನದಲ್ಲಿ ಚಾಲನೆಗೊಳ್ಳಲಿದ್ದು, ಇದ್ದರಿಂದ ಈ ಭಾಗದ ಅನೇಕ ಗ್ರಾಮಗಳಿಗೆ, ತಾಂಡಾಗಳಿಗೆ ಕುಡಿಯುವ ನೀರು ಪೂರೈಕೆಯಾಗಲಿದೆ. ವಾಣಿಜ್ಯ ಬೆಳೆ ಬೆಳೆ­ಯಲು ಸಹಕಾರಿಯಾಗಲಿದೆ ಎಂದರು.

ಆನಂದ್ ಸಿಂಗ್, ರಮೇಶ್ ಜಾರಕಿಹೊಳಿ ರಾಜೀನಾಮೆ ಪತ್ರ ಕಳಿಸಿದ ಮಾತ್ರಕ್ಕೆ ರಾಜೀನಾಮೆ ಅಂಗಿಕಾರ ಆಗೋದಿಲ್ಲ. ಖುದ್ದಾಗಿ ಬಂದು ಸ್ಪಿಕರ್ ಬಳಿ ರಾಜೀನಾಮೆ ಪತ್ರ ನೀಡಬೇಕು. ಆಮೇಲೆ ಸ್ಪಿಕರ್ ತನಿಖೆ ಮಾಡಬೇಕಾಗುತ್ತೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ ಪ್ರತಿಕ್ರಿಯಿಸಿದರು.

ಸೋಮ ವರಹಟ್ಟಿ ಯಲ್ಲಿ ನಂತರ ಮಾತನಾಡುದ ಗೃಹ ಸಚಿವ ಪಾಟೀಲ್, ಇನ್ನು 4 ಜನ ರಾಜೀನಾಮೆ ಕುರಿತು ಎಂಬಿ ಪಾಟೀಲರಿಗೆ ಮಾಹಿತಿ ಇದೆ ಎಂದು ಈಶ್ವರಪ್ಪ ಹೇಳುತ್ತಿದ್ದಾರೆ. ಇಂಟೆಲಿಜೆನ್ಸಿ ನೆಟ್ವರ್ಕ್ ನಮ್ಮದಲ್ಲ. ಅವರು ದೊಡ್ಡವರು, ಮೇಧಾವಿಗಳು. ಅದಕ್ಕಾಗಿ ಅವ್ರನ್ನೇ ಈ ಬಗ್ಗೆ ಕೇಳಿ ಎಂದು ವ್ಯಂಗ್ಯವಾಡಿದರು. ಯಾವ ಕಾಲಕ್ಕೂ ನಮ್ಮ 15 ಜನ ರಾಜೀನಾಮೆ ನೀಡಲ್ಲ ಎಂದು ವಿಶ್ವಾಸದಿಂದಲೇ ಹೇಳಿ ಮುನ್ನಡೆದರು.