ಸಿಎಂ ಕುಮಾರಸ್ವಾಮಿ ಸಹೋದರ, ಸಚಿವ ರೇವಣ್ಣ ಇದ್ದರೆ ಅಲ್ಲೊಂದು ವಾಸ್ತು ಪ್ರಕಾರ ಕತೆ ಇದ್ದೆ ಇರುತ್ತದೆ. ಅದು ಶಂಕು ಸ್ಥಾಪನೆ ಆಗಿರಲಿ, ಮನೆ ಗೃಹ ಪ್ರವೇಶ ಆಗಿರಲಿ.. ಕೊನೆಗೆ ಸಚಿವ ಸಂಪುಟ ಸಭೆಯೇ ಆಗಿರಲಿ... ಇಂಥದ್ದೆ ಒಂದು ವಾಸ್ತು ಪ್ರಕಾರಕ್ಕೆ ಬುಧವಾರದ ಸಂಪುಟ ಸಭೆ ಸಾಕ್ಷಿಯಾಯಿತು.

ಬೆಂಗಳೂರು[ಡಿ.05] ಸಿಎಂ ಕುಮಾರಸ್ವಾಮಿ ದೇವರಾಜ್ ಅರಸು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬ್ಯುಸಿಯಾಗಿದ್ದರು. ಇದಾದ ಮೇಲೆ ಸಚಿವ ಸಂಪುಟ ಸಭೆ ನಡೆಯಬೇಕಾಗಿತ್ತು.

Add Asianetnews Kannada as a Preferred SourcegooglePreferred

ಆದರೆ ಇದ್ದಕ್ಕಿದಂತೆ ರೇವಣ್ಣ ತಮ್ಮ ಬಾಲ್ಯದ ದಿನ ನೆನಪು ಮಾಡಿಕಂಡರೋ ಗೊತ್ತಿಲ್ಲ. ವಾಸ್ತು, ರಾಹು ಕಾಲ ಎಲ್ಲವೂ ರೇವಣ್ಣ ಅವರನ್ನು ಕಟುಕಲು ಶುರುಮಾಡಿತೋ ಎನೋ...ಕುಮಾರಸ್ವಾಮಿ ಅವರ ಕೈ ಹಿಡಿದು ಎಳೆಯಲು ಆರಂಭಿಸಿದ್ದರು.

ಸುದ್ದಿಗೋಷ್ಠೀಯಲ್ಲಿ ಬಜ್ಜಿ ತಿಂದು ಕಣ್ಣೀರಿಟ್ಟ ರೇವಣ್ಣ... ಸಖತ್ ಫನ್ನಿ

ಭುಜ ಮುಟ್ಟಿ ಕರೆದು ರಾಹು ಕಾಲ ಶುರುವಾಗಿಬಿಡುತ್ತೆ, ಬೇಗ ಸಚಿವ ಸಂಪುಟ ಸಭೆ ಆರಂಭ ಮಾಡಿ ಬಿಡೋಣ ಎಂದು ರೇವಣ್ಣ ಹೇಳುತ್ತಿದ್ದರು. ಆದರೆ ಸ್ವಲ್ಪ ಸಮಯ ಕಾಯುವಂತೆ ಕುಮಾರಸ್ವಾಮಿ ಸನ್ನೆಯಲ್ಲಿ ತಿಳಿಸಿದರು. ಆದರೂ ಸಿಎಂ ಹಿಂದೆಯೇ ಚಡಪಡಿಸುತ್ತ ರೇವಣ್ಣ ಓಡಾಡುತ್ತಿದ್ದರು. ಒಟ್ಟಿನಲ್ಲಿ ರೇವಣ್ಣ ಇದ್ದಲ್ಲಿ ಎಲ್ಲವೂ ವಾಸ್ತು ಪ್ರಕಾರವೇ ಆಗಬೇಕು ಎಂಬುದನ್ನು ಮತ್ತೆ ಸಾಬೀತು ಮಾಡಿದ್ದಾರೆ.