ಗಂಟೆ ರಾತ್ರಿ 11 ಆದರೂ ಸದನದಲ್ಲಿ ವಿಶ್ವಾಸ ಮತ ಯಾಚನೆ ಚರ್ಚೆ ಮುಂದುವರಿದಿದೆ. ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲು ದೋಸ್ತಿಗಳು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದರೆ, ಬಿಜೆಪಿ ತನ್ನ ಪಟ್ಟು ಸಡಿಲಿಸಲು ತಯಾರಿಲ್ಲ.

ಬೆಂಗಳೂರು[ಜು.22] ಸನ್ಮಾನ್ಯ ಅಧ್ಯಕ್ಷರೆ ಸದನದಲ್ಲಿ ಮಹಿಳೆಯರಿದ್ದಾಋಎ, ವಯಸ್ಸಾದವರಿದ್ದಾರೆ ದಯವಿಟ್ಟು ಚರ್ಚೆಯನ್ನು ನಾಳೆ ಬೆಳಗ್ಗೆಗೆ ಮುಂದೂಡಿ ಎಂದು ದೋಸ್ತಿ ಪಕ್ಷದ ಮಹಿಳಾ ಶಾಸಕಿ ಕೆಜಿಎಫ್ ಶಾಸಕಿ ರೂಪಾ ಶಶಿಧರ್ ಹೇಳಿದ್ದು ಸದನದಲ್ಲಿ ಮತ್ತೊಂದು ಸುತ್ತಿನ ಗೊಂದಲಕ್ಕೆ ವೇದಿಕೆ ಮಾಡಿಕೊಟ್ಟಿತು.

Add Asianetnews Kannada as a Preferred SourcegooglePreferred

ಅತ್ತ ರಾತ್ರಿ ಊಟಕ್ಕಾಗಿ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಹೊರನಡೆದರೆ, ಇತ್ತ ಮಹಿಳಾ ಶಾಸಕಿಯರು ಹೈರಾಣಾಗಿದ್ದಾರೆ. ಕೆಜಿಎಫ್ ಶಾಸಕಿ ರೂಪಾ ಶಶಿಧರ್, ಸದನದಲ್ಲಿ ಮಹಿಳೆಯರಿದ್ದಾರೆ, ವಯಸ್ಸಾದವರಿದ್ದಾರೆ, ಮಾನವೀಯತೆಯ ದೃಷ್ಟಿಯಿಂದಾದರೂ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಿ ಎಂದು ಉಪ-ಸಭಾಪತಿ ಕೃಷ್ಣಾರೆಡ್ಡಿಯವರಿಗೆ ಮನವಿಮಾಡಿಕೊಂಡರು. ಅದಕ್ಕೆ ಇತರ ಶಾಸಕಿಯರೂ ಧ್ವನಿಗೂಡಿಸಿದರು.

ಕಾಂಗ್ರೆಸ್ ಶಾಸಕಿಯರ ಈ ಬೇಡಿಕೆಗೆ ಬಿಜೆಪಿ ಶಾಸಕಿಯರು ತಿರುಗೇಟು ನೀಡಿದರು. ಇಲ್ಲಿ ಎಲ್ಲಾ ವ್ಯವಸ್ಥೆ ಇದೆ, ನಾವು ಎಷ್ಟು ಹೊತ್ತಾದರೂ ಇರಲು ರೆಡಿಯಾಗಿದ್ದೀವಿ. ಮೊದಲು ವಿಶ್ವಾಸ ಮತದ ಚರ್ಚೆಯಾಗಲಿ ಎಂದು ಬಿಜೆಪಿ ಶಾಸಕಿಯರು ಪಟ್ಟು ಹಿಡಿದರು. ಸದನ ಮುಂದುವರಿದಿದೆ.