ಗಂಟೆ ರಾತ್ರಿ 11 ಆದರೂ ಸದನದಲ್ಲಿ ವಿಶ್ವಾಸ ಮತ ಯಾಚನೆ ಚರ್ಚೆ ಮುಂದುವರಿದಿದೆ. ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲು ದೋಸ್ತಿಗಳು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದರೆ, ಬಿಜೆಪಿ ತನ್ನ ಪಟ್ಟು ಸಡಿಲಿಸಲು ತಯಾರಿಲ್ಲ.

ಬೆಂಗಳೂರು[ಜು.22] ಸನ್ಮಾನ್ಯ ಅಧ್ಯಕ್ಷರೆ ಸದನದಲ್ಲಿ ಮಹಿಳೆಯರಿದ್ದಾಋಎ, ವಯಸ್ಸಾದವರಿದ್ದಾರೆ ದಯವಿಟ್ಟು ಚರ್ಚೆಯನ್ನು ನಾಳೆ ಬೆಳಗ್ಗೆಗೆ ಮುಂದೂಡಿ ಎಂದು ದೋಸ್ತಿ ಪಕ್ಷದ ಮಹಿಳಾ ಶಾಸಕಿ ಕೆಜಿಎಫ್ ಶಾಸಕಿ ರೂಪಾ ಶಶಿಧರ್ ಹೇಳಿದ್ದು ಸದನದಲ್ಲಿ ಮತ್ತೊಂದು ಸುತ್ತಿನ ಗೊಂದಲಕ್ಕೆ ವೇದಿಕೆ ಮಾಡಿಕೊಟ್ಟಿತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅತ್ತ ರಾತ್ರಿ ಊಟಕ್ಕಾಗಿ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಹೊರನಡೆದರೆ, ಇತ್ತ ಮಹಿಳಾ ಶಾಸಕಿಯರು ಹೈರಾಣಾಗಿದ್ದಾರೆ. ಕೆಜಿಎಫ್ ಶಾಸಕಿ ರೂಪಾ ಶಶಿಧರ್, ಸದನದಲ್ಲಿ ಮಹಿಳೆಯರಿದ್ದಾರೆ, ವಯಸ್ಸಾದವರಿದ್ದಾರೆ, ಮಾನವೀಯತೆಯ ದೃಷ್ಟಿಯಿಂದಾದರೂ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಿ ಎಂದು ಉಪ-ಸಭಾಪತಿ ಕೃಷ್ಣಾರೆಡ್ಡಿಯವರಿಗೆ ಮನವಿಮಾಡಿಕೊಂಡರು. ಅದಕ್ಕೆ ಇತರ ಶಾಸಕಿಯರೂ ಧ್ವನಿಗೂಡಿಸಿದರು.

ಕಾಂಗ್ರೆಸ್ ಶಾಸಕಿಯರ ಈ ಬೇಡಿಕೆಗೆ ಬಿಜೆಪಿ ಶಾಸಕಿಯರು ತಿರುಗೇಟು ನೀಡಿದರು. ಇಲ್ಲಿ ಎಲ್ಲಾ ವ್ಯವಸ್ಥೆ ಇದೆ, ನಾವು ಎಷ್ಟು ಹೊತ್ತಾದರೂ ಇರಲು ರೆಡಿಯಾಗಿದ್ದೀವಿ. ಮೊದಲು ವಿಶ್ವಾಸ ಮತದ ಚರ್ಚೆಯಾಗಲಿ ಎಂದು ಬಿಜೆಪಿ ಶಾಸಕಿಯರು ಪಟ್ಟು ಹಿಡಿದರು. ಸದನ ಮುಂದುವರಿದಿದೆ.