Asianet Suvarna News Asianet Suvarna News

ಕರುಣಾನಿಧಿ ಆರೋಗ್ಯ ಮತ್ತಷ್ಟು ಗಂಭೀರ!

ಕರುಣಾನಿಧಿ ಆರೋಗ್ಯದಲ್ಲಿ ಏರುಪೇರು

ಮತ್ತಷ್ಟು ಹದಗೆಟ್ಟ ಕರುಣಾನಿಧಿ ಆರೋಗ್ಯ

ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಕೆಲವೇ ಕ್ಷಣಗಳಲ್ಲಿ ವೈದ್ಯರಿಂದ ಸುದ್ದಿಗೋಷ್ಠಿ

ಚೆನ್ನೈ ನಗರಕ್ಕೆ ಹೆಚ್ಚಿನ ಪೊಲೀಸ್ ಭದ್ರತೆ

Karunanidhi Critical, Family And Supporters Gather At Hospital
Author
Bengaluru, First Published Jul 29, 2018, 9:52 PM IST

ಚೆನ್ನೈ(ಜು.29): ಡಿಎಂಕೆ ಮುಖ್ಯಸ್ಥ, ತಮಿಳುನಾಡು ಮಾಜಿ ಸಿಎಂ ಎಂ. ಕರುಣಾನಿಧಿ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಕರುಣಾನಿಧಿ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಮತ್ತಷ್ಟು ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಕರುಣಾನಿಧಿ ಕುಟುಂಬ ಆಸ್ಪತ್ರೆಗೆ ಧಾವಿಸಿದ್ದು, ತಮಿಳುನಾಡು ಸಿಎಂ ಪಳನಿಸ್ವಾಮಿ ಸೇಲಂ ಕಾರ್ಯಕ್ರಮ ರದ್ದುಗೊಳಿಸಿ ಚೆನ್ನೈನತ್ತ ಧಾವಿಸುತ್ತಿದ್ದಾರೆಎಂದು ಮೂಲಗಳು ತಿಳಿಸಿವೆ.

Karunanidhi Critical, Family And Supporters Gather At Hospital

ಇನ್ನು ಕೆಲವೇ ಕ್ಷಣಗಳಲ್ಲಿ ಕಾವೇರಿ ಆಸ್ಪತ್ರೆ ವೈದ್ಯರು ಸುದ್ದಿಗೋಷ್ಠಿ ನಡೆಸಲಿದ್ದು, ಕಾವೇರಿ ಆಸ್ಪತ್ರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಇದೇ ವೇಳೇ ಇಡೀ ಚೆನ್ನೈ ನಗರಕ್ಕೂ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ.
 

Follow Us:
Download App:
  • android
  • ios