ಹಿಂಸಾಚಾರ ತ್ಯಜಿಸಿ ಮನೆಗೆ ಮರಳುವಂತೆ ತಾಯಿಯ ಮನವಿಗೆ ಓಗೊಟ್ಟ ಯುವಕನೊಬ್ಬ ಪೊಲೀಸರಿಗೆ ಶರಣಾದ ಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದೆ.

ಜಮ್ಮು/ಶ್ರೀನಗರ: ಹಿಂಸಾಚಾರ ತ್ಯಜಿಸಿ ಮನೆಗೆ ಮರಳುವಂತೆ ತಾಯಿಯ ಮನವಿಗೆ ಓಗೊಟ್ಟ ಯುವಕನೊಬ್ಬ ಪೊಲೀಸರಿಗೆ ಶರಣಾದ ಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದೆ. ಇತ್ತೀಚೆಗಷ್ಟೇ ಇದೇ ರೀತಿ ಕುಟುಂಬ ಸದಸ್ಯರ ಮನವಿಗೆ ಓಗೊಟ್ಟು 4 ಯುವಕರು ಉಗ್ರವಾದ ತ್ಯಜಿಸಿ ಮುಖ್ಯವಾಹಿನಿಗೆ ಮರಳಿದ್ದರು.

Add Asianetnews Kannada as a Preferred SourcegooglePreferred

ಅದರ ಬೆನ್ನಲ್ಲೇ ಇದೀಗ ಮತ್ತೋರ್ವ ಯುವಕ, ಹಿಂಸೆ ತ್ಯಜಿಸುವ ನಿರ್ಧಾರ ಕೈಗೊಂಡಿದ್ದಾನೆ. ಉಗ್ರ ಚಟುವಟಿಕೆಯನ್ನು ಬಿಟ್ಟು ಶರಣಾಗತರಾಗುವ ಸ್ಥಳೀಯರನ್ನು ಸ್ವೀಕರಿಸುವುದಾಗಿ ಕಳೆದ ವರ್ಷ ಪೊಲೀಸರು ಪ್ರಕಟಿಸಿದ ಬಳಿಕ ಇದುವರೆಗೆ 12ಕ್ಕೂ ಹೆಚ್ಚು ಉಗ್ರರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿದ್ದಾರೆ.