"ಯಾರೋ ಉಗ್ರನೋ, ಸೈನಿಕನೋ ಅವರನ್ನ ಕೊಲ್ಲಲಿಲ್ಲ. ಜನರ ಗುಂಪು ಹತ್ಯೆ ಮಾಡಿದೆ. ಅವರು ಅಮಾಯಕನನ್ನು ಕೊಂದಿದ್ದಾರೆ. ತಹಜೂದ್ ಗುಜರ್ (ರಾತ್ರಿ ವೇಳೆ ಪ್ರಾರ್ಥಿಸುವವರು)ನನ್ನ ಕೊಂದಿದ್ದಾರೆ" ಎಂದು ಆಯುಬ್ ಪಂಡಿತ್'ನ ಸಂಬಂಧಿಕರು ಬೇಸರ ವ್ಯಕ್ತಪಡಿಸಿದ್ದಾರೆ.

ಶ್ರೀನಗರ(ಜೂನ್ 23): ನಿನ್ನೆ ತಡರಾತ್ರಿ ಜನರ ಗುಂಪೊಂದು ನಡೆಸಿದ ಹಲ್ಲೆಗೆ ಮೊಹಮ್ಮದ್ ಆಯುಬ್ ಪಂಡಿತ್ ಬಲಿಯಾದ ಘಟನೆ ಇಡೀ ದೇಶಕ್ಕೆ ಆಘಾತ ಮೂಡಿಸಿದೆ. ಡಿಎಸ್'ಪಿ ಪಂಡಿತ್ ಅಂತ್ಯಕ್ರಿಯೆ ವೇಳೆ ಅವರ ಸಹೋದ್ಯೋಗಿಗಳಂತೂ ಅಕ್ಷರಶಃ ಕಣ್ಣೀರು ಹಾಕಿದ್ದಾರೆ. ಮೊಹಮ್ಮದ್ ಆಯುಬ್ ಪಂಡಿತ್ ಅವರ ಸಂಬಂಧಿಕರು ಈ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿನಾಕಾರಣ ಒಬ್ಬ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡುವ ನೀಚ ಮಟ್ಟಕ್ಕೆ ನಾವು ತಲುಪಿಬಿಟ್ಟೆವಲ್ಲಾ ಎಂದು ಪಂಡಿತ್ ಸಂಬಂಧಿಕರು ಶೋಕ ತೋಡಿಕೊಂಡಿದ್ದಾರೆ.

Add Asianetnews Kannada as a Preferred SourcegooglePreferred

"ಮಸೀದಿಯ ಹೊರಗೆ ವಿನಾಕಾರಣ ಒಬ್ಬ ವ್ಯಕ್ತಿಯನ್ನು ಕೊಲ್ಲುತ್ತೇವೆ ಎಂದರೆ ನಾವು ಯಾವ ಮಟ್ಟಕ್ಕೆ ಇಳಿದುಬಿಟ್ಟಿದ್ದೀವಿ? ಇದನ್ನೆಯಾ ಧರ್ಮ ನಮಗೆ ಕಲಿಸಿರುವುದು?" ಎಂದು ಅವರು ಪ್ರಶ್ನಿಸಿದ್ದಾರೆ.

"ಜನರನ್ನು ಕೊಲ್ಲತೊಡಗಿದ್ದೇವಲ್ಲಾ, ನಾವೂ ಹೋರಾಟ ಮಾಡುತ್ತಿರುವುದು ಈ ಆಜಾದೀ(ಸ್ವಾತಂತ್ರ್ಯ)ಗೆಯಾ? ಇಂಥ ಸ್ವಾತಂತ್ರ್ಯ ಪಡೆದುಕೊಂಡು ಏನು ಮಾಡುವುದು?

"ಯಾರೋ ಉಗ್ರನೋ, ಸೈನಿಕನೋ ಅವರನ್ನ ಕೊಲ್ಲಲಿಲ್ಲ. ಜನರ ಗುಂಪು ಹತ್ಯೆ ಮಾಡಿದೆ. ಅವರು ಅಮಾಯಕನನ್ನು ಕೊಂದಿದ್ದಾರೆ. ತಹಜೂದ್ ಗುಜರ್ (ರಾತ್ರಿ ವೇಳೆ ಪ್ರಾರ್ಥಿಸುವವರು)ನನ್ನ ಕೊಂದಿದ್ದಾರೆ" ಎಂದು ಆಯುಬ್ ಪಂಡಿತ್'ನ ಸಂಬಂಧಿಕರು ಬೇಸರ ವ್ಯಕ್ತಪಡಿಸಿದ್ದಾರೆ.