ರಾಜ್ಯದ ಪ್ರತಿಯೊಬ್ಬ ರೈತರಿಗೂ ತಲಾ 5 ಲಕ್ಷ ಜೀವ ವಿಮೆ ಸೌಲಭ್ಯ ನೀಡುವುದಾಗಿ ತೆಲಂಗಾಣ ಸರ್ಕಾರ ಘೊಷಣೆ ಮಾಡಿದೆ.
ಹೈದ್ರಾಬಾದ್ (ಮೇ 26) : ರಾಜ್ಯದ ಪ್ರತಿಯೊಬ್ಬ ರೈತರಿಗೂ ತಲಾ 5 ಲಕ್ಷ ಜೀವ ವಿಮೆ ಸೌಲಭ್ಯ ನೀಡುವುದಾಗಿ ತೆಲಂಗಾಣ ಸರ್ಕಾರ ಘೋಷಣೆ ಮಾಡಿದೆ.
ಇದೇ ವರ್ಷದ ಆಗಸ್ಟ್ 15ರಿಂದ ಈ ಹೊಸ ಯೋಜನೆಯು ಜಾರಿಗೆ ನಿರ್ಧರಿಸಲಾಗಿದ್ದು, ವಿಮಾ ಕಂಪನಿಗಳು ಹಾಗೂ ತಮ್ಮ ಸಂಪುಟದ ಸಚಿವರೊಂದಿಗೆ ಈ ಬಗ್ಗೆ ಚರ್ಚೆ ನಡೆಸಿ ಈ ಯೋಜನೆಯನ್ನು ಘೋಷಣೆ ಮಾಡಲಾಗಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರ ಶೇಖರ್ ರಾವ್ ಹೇಳಿದ್ದಾರೆ.
ಈ ವಿಮೆಯ ಸಂಪೂರ್ಣ ಹಣವನ್ನೂ ಕೂಡ ತೆಲಂಗಾಣ ಸರ್ಕಾರವೇ ಭರಿಸುತ್ತದೆ. 18ರಿಂದ 59 ವರ್ಷ ವಯಸ್ಸಿನ ಪ್ರತೀಯೊಬ್ಬ ರೈತರಿಗೂ ಈ ಯೋಜನೆ ಅನ್ವಯವಾಗಲಿದೆ ಎಂದು ಮುಖ್ಯಮಂತ್ರಿ ಚಂದ್ರ ಶೇಖರ್ ರಾವ್ ಹೇಳಿದ್ದಾರೆ.
ಪ್ರತೀ ವರ್ಷ ಆಗಸ್ಟ್ ತಿಂಗಳಲ್ಲಿ ವಿಮೆಯ ಪ್ರೀಮಿಯಂ ಪಾವತಿ ಮಾಡಲಾಗುತ್ತದೆ. ಇನ್ನು ಯಾವುದೇ ರೈತರು ಮೃತಪಟ್ಟಾಗ ಅದರ ಹಣವು ನಾಮಿನಿಗೆ 10 ದಿನಗಳಲ್ಲೇ ಸೇರುತ್ತದೆ ಎಂದು ತಿಳಿಸಿದ್ದಾರೆ.
