ಮಗಳು ಚಾಲಕನಿಗೆ ಹೊಡೆದಳು: ಅಪ್ಪ ಎಡಿಜಿಪಿ ಹುದ್ದೆ ಕಳೆದುಕೊಂಡರುಕಚೇರಿಯ ಚಾಲಕನಿಗೆ ಎಡಿಜಿಪಿ ಮಗಳಿಂದ ಥಳಿತ ಪ್ರಕರಣಎಡಿಜಿಪಿ ವಜಾಗೊಳಿಸಿದ ಸಿಎಂ ಪಿಣರಾಯಿ ವಿಜಯನ್ಎಡಿಜಿಪಿ ಸುದೇಶ್ ಕುಮಾರ್ ವಿರುದ್ದ ತನಿಖೆಗೆ ಆದೇಶ

ತಿರುವನಂತಪುರಂ(ಜೂ.16): ಕೇರಳದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಮಗಳು ಕಚೇರಿಯ ಚಾಲಕನ ಮೇಲೆ ಹಲ್ಲೆ ನಡೆಸಿ, ಗಾಯಗೊಳಿಸಿದ್ದ ಆರೋಪದ ಮೇರೆಗೆ ಎಡಿಜಿಪಿ ಸ್ಥಾನದಿಂದ ಸುದೇಶ್ ಕುಮಾರ್ ಅವರನ್ನು ವಜಾಗೊಳಿಸಲಾಗಿದೆ.

Add Asianetnews Kannada as a Preferred SourcegooglePreferred

ಪೊಲೀಸ್ ಡ್ರೈವರ್ ಗಾವಸ್ಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನ ಹೆಂಡತಿ ಸಿಎಂ ಪಿಣರಾಯ್ ವಿಜಯನ್ ಅವರನ್ನು ನೇರವಾಗಿ ಭೇಟಿ ಮಾಡಿ ಅಧಿಕಾರಿಯ ವಿರುದ್ಧ ದೂರು ದಾಖಲಿಸಿದ್ದರು. ಈ ಸಂಬಂಧ ವರದಿ ತರಿಸಿಕೊಂಡಿದ್ದ ಸಿಎಂ ಪಿಣರಾಯಿ ವಿಜಯನ್, ದಕ್ಷಿಣ ವಲಯ ಎಡಿಜಿಪಿ ಅನಿಲ್ ಕುಮಾರ್ ಅವರಿಂದ ಮಾಹಿತಿ ಸಂಗ್ರಹಿಸಿ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

ಸುದೇಶ್ ಕುಮಾರ್ ವಿರುದ್ದ ಈ ಹಿಂದೆ ಪೊಲೀಸರನ್ನು ತಮ್ಮ ಮನೆ ಕೆಲಸಕ್ಕೆ ಬಳಸಿಕೊಳ್ಳುತ್ತಿದ್ದ ದೂರು ಕೂಡ ಕೇಳಿ ಬಂದಿತ್ತು. ಆದರೆ ಈ ಪ್ರಕರಣವನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದಿರುವ ಸರ್ಕಾರ, ಸುದೇಶ್ ಕುಮಾರ್ ಅವರನ್ನು ಎಡಿಜಿಪಿ ಹುದ್ದೆಯಿಂದ ವಜಾಗೊಳಿಸಿದೆ. ಅವರಿಗೆ ಸರ್ಕಾರದ ಬೇರೆ ಇಲಾಖೆಯಲ್ಲಿ ಹುದ್ದೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆ ಪೊಲೀಸ್ ಡ್ರೈವರ್ ನೀಡಿರುವ ದೂರಿನ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಲಾಗುವುದು ಎಂದು ರಾಜ್ಯ ಪೊಲೀಸ್ ಮುಖ್ಯಸ್ಥ ಲೋಕನಾಥ್ ಬೆಹೆರಾ ಭರವಸೆ ನೀಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಅಪರಾಧ ವಿಭಾಗದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂಧು ಮೂಲಗಳು ತಿಳಿಸಿವೆ.