ದೇವರ ನಾಡಲ್ಲಿ ನಿಲ್ಲದ ಮಳೆ: 5 ಜಿಲ್ಲೆಗಳಲ್ಲಿ ಮತ್ತೆ ರೆಡ್ ಅಲರ್ಟ್!
ದೇವರ ನಾಡಲ್ಲಿ ನಿಲ್ಲದ ಮಳೆ: 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್| 90 ಕ್ಕೇರಿದ ಸಾವಿನ ಸಂಖ್ಯೆ| ಉತ್ತರ ಕೇರಳ ಶಾಂತ, ಮಧ್ಯ ಕೇರಳದಲ್ಲಿ ಮಳೆ ಆರ್ಭಟ| 90ಕ್ಕೇರಿದ ಸಾವಿನ ಸಂಖ್ಯೆ, 40 ಮಂದಿ ನಾಪತ್ತೆ| 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್, 5 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್| 1332 ಕೇಂದ್ರಗಳಲ್ಲಿ 2.52 ಲಕ್ಷ ನಿರಾಶ್ರಿತರಿಗೆ ವಸತಿ ಸೌಲಭ್ಯ
ತಿರುವನಂತಪುರಂ[ಆ.14]: ದೇವರ ನಾಡಿನಲ್ಲಿ ವರುಣನ ತಾಂಡವ ಮುಂದುವರಿದಿದ್ದು, ಮತ್ತೆ ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದ ಉತ್ತರ ಭಾಗದಲ್ಲಿ ಮಳೆ ಆರ್ಭಟ ಕಡಿಮೆಯಾಗುತ್ತಿದ್ದಂತೆ, ಮಧ್ಯ ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು ಆಲಪ್ಪುಳ, ಎರ್ನಾಕುಲಂ, ಕೊಚ್ಚಿ ಸೇರಿ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಲಪ್ಪುರಂ ಹಾಗೂ ಕೋಯಿಕ್ಕೋಡ್ನಲ್ಲಿ ರೆಡ್ ಅಲರ್ಟ್ ಮುಂದುವರಿದಿದ್ದು, ಕೊಲ್ಲಂ, ಪಟ್ಟಣಂತಿಟ್ಟ, ಕೊಟ್ಟಾಯಂ, ಪಾಲಕ್ಕಾಡ್ ಹಾಗೂ ತ್ರಿಶ್ಶೂರ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮಳೆಯ ಪ್ರಮಾಣ ಹೆಚ್ಚಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಿರುವ ಜಿಲ್ಲೆಗಳಲ್ಲಿ 20 ಸೆಂ.ಮಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಣಭೀಕರ ಮಳೆ ರಾಜ್ಯಾದ್ಯಂತ ಈ ವರೆಗೆ 90 ಮಂದಿಯನ್ನು ಬಲಿ ಪಡೆದುಕೊಂಡಿದ್ದು, 40 ಮಂದಿ ಕಣ್ಮರೆಯಾಗಿದ್ದಾರೆ. ರಾಜ್ಯಾದ್ಯಂತ 1,332 ಕಾಳಜಿ ಕೇಂದ್ರಗಳಲ್ಲಿ 2.52 ಲಕ್ಷ ಜನ ಆಶ್ರಯ ಪಡೆದುಕೊಂಡಿದ್ದಾರೆ. ವಯನಾಡ್, ಮಲಪ್ಪುರಂ ಹಾಗೂ ಕೋಝಿಕ್ಕೋಡ್ ಜಿಲ್ಲೆಗಳಲ್ಲಿ ಗುಡ್ಡ ಕುಸಿತದಿಂದ ಹೆಚ್ಚು ಹಾನಿ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿವೆ. ನೆರೆ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಹಿತ ಸಂಪುಟ ಸದಸ್ಯರು ಭೇಟಿ ನೀಡಿ ಸಂತ್ರಸ್ತರಿಗೆ ಧೈರ್ಯ ತುಂಬಿದ್ದು, ಸರ್ಕಾರದಿಂದ ಎಲ್ಲಾ ನೆರವು ನೀಡಲಾಗುವುದು ಎಂದು ಅಭಯ ನೀಡಿದ್ದಾರೆ.