ಬೆಂಗಳೂರು (ಫೆ.15): ಸಿಎಂ, ಸಚಿವ ಮಹದೇವಪ್ಪ, ಸಂಸದ ಧ್ರುವನಾರಾಯಣ ಅವರ ಸಲಹೆ ಮೇರೆಗೆ ಕಾಂಗ್ರೆಸ್ ಪಕ್ಷಕ್ಕೆ ಕೇಶವಮೂರ್ತಿ ಸೇರ್ಪಡೆಯಾಗ್ತಿದ್ದಾರೆ. ಅಹಿಂದ ಅಂತ ನಮ್ಮನ್ನ ಕರೆಯುತ್ತಾರೆ. ನಮಗೇನೂ ಬೇಜಾರು ಇಲ್ಲ, ನಾವು ಇರೋದು ಅವರಿಗಾಗಿ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರು (ಫೆ.15): ಸಿಎಂ, ಸಚಿವ ಮಹದೇವಪ್ಪ, ಸಂಸದ ಧ್ರುವನಾರಾಯಣ ಅವರ ಸಲಹೆ ಮೇರೆಗೆ ಕಾಂಗ್ರೆಸ್ ಪಕ್ಷಕ್ಕೆ ಕೇಶವಮೂರ್ತಿ ಸೇರ್ಪಡೆಯಾಗ್ತಿದ್ದಾರೆ. ಅಹಿಂದ ಅಂತ ನಮ್ಮನ್ನ ಕರೆಯುತ್ತಾರೆ. ನಮಗೇನೂ ಬೇಜಾರು ಇಲ್ಲ, ನಾವು ಇರೋದು ಅವರಿಗಾಗಿ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ಮುಂದಿನ ತಿಂಗಳು ಸಿಎಂ 12ನೇ ಬಜೆಟ್ ಮಂಡಿಸುತ್ತಿದ್ದಾರೆ. ಕಳೆದ ಬಾರಿ ದಲಿತ ಸಮುದಾಯಕ್ಕಾಗಿ 21000 ಕೋಟಿ ರೂ. ಮೀಸಲಿಡಲಾಗಿತ್ತು. ಈ ಬಾರಿಯೂ ದಲಿತ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಲಿದ್ದಾರೆ.

ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನೂರಕ್ಕೆ ನೂರರಷ್ಟು ಗೆಲ್ಲಲಿದೆ. ಕೇಶವಮೂರ್ತಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಿ ಗೆಲ್ಲಲಿದ್ದಾರೆ. ಇದರ ಜೊತೆ ಗುಂಡ್ಲುಪೇಟೆಯಲ್ಲಿ ಉಪಚುನಾವಣೆ ಇದೆ.

ಈ ಎರಡು ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ರಾಜ್ಯಕ್ಕೆ ಕಾಂಗ್ರೆಸ್ ಪಕ್ಷದ ಸಂದೇಶ ಕಳುಹಿಸಬೇಕಾಗುತ್ತೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮತ್ತೆ ಅಧಿಕಾರ ಹಿಡಿಯಲಿದ್ದೇವೆ . ಹೈಕಮಾಂಡ್ ಅನುಮತಿ ಮೇರೆಗೆ ಕೇಶವಮೂರ್ತಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಕೆಪಿಸಿಸಿ‌ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.