Asianet Suvarna News Asianet Suvarna News

ರಫೇಲ್‌ : ಎಜಿ, ಸಿಎಜಿಗೆ ಪಿಎಸಿ ಸಮನ್ಸ್‌?

ರಫೇಲ್‌ ಯುದ್ಧ ವಿಮಾನಗಳಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ತೀರ್ಪು ನೀಡಿದ ತರುವಾಯವೂ ಆ ಕುರಿತ ವಿವಾದ ಬಗೆಹರಿಯುವಂತೆ ಕಾಣುತ್ತಿಲ್ಲ. ಸರ್ವೋಚ್ಚ ನ್ಯಾಯಾಲಯ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿರುವ ಒಂದು ಸಾಲನ್ನೇ ಗಟ್ಟಿಯಾಗಿ ಹಿಡಿದುಕೊಂಡಿರುವ ಕಾಂಗ್ರೆಸ್‌, ಸರ್ಕಾರದ ವಿರುದ್ಧ ದಾಳಿಯನ್ನು ಮುಂದುವರಿಸಿದೆ. 

Kharge  Says He May Request PAC to Summon AG CAG  On Rafale
Author
Bengaluru, First Published Dec 16, 2018, 7:14 AM IST

ನವದೆಹಲಿ: ರಫೇಲ್‌ ಯುದ್ಧ ವಿಮಾನಗಳಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ತೀರ್ಪು ನೀಡಿದ ತರುವಾಯವೂ ಆ ಕುರಿತ ವಿವಾದ ಬಗೆಹರಿಯುವಂತೆ ಕಾಣುತ್ತಿಲ್ಲ. ಸರ್ವೋಚ್ಚ ನ್ಯಾಯಾಲಯ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿರುವ ಒಂದು ಸಾಲನ್ನೇ ಗಟ್ಟಿಯಾಗಿ ಹಿಡಿದುಕೊಂಡಿರುವ ಕಾಂಗ್ರೆಸ್‌, ಸರ್ಕಾರದ ವಿರುದ್ಧ ದಾಳಿಯನ್ನು ಮತ್ತಷ್ಟುತೀವ್ರಗೊಳಿಸಿದೆ.

‘ರಫೇಲ್‌ ವಿಮಾನಗಳ ಬೆಲೆಗೆ ಸಂಬಂಧಿಸಿದ ಸಿಎಜಿ ವರದಿಯನ್ನು ಸಂಸತ್ತಿನಲ್ಲಿ ಮಂಡಿಸಲಾಗಿದೆ. ಸಾರ್ವಜನಿಕ ಲೆಕ್ಕ ಪತ್ರ ಸಮಿತಿ (ಪಿಎಸಿ) ಕೂಡ ಆ ಬಗ್ಗೆ ಚರ್ಚಿಸಿದೆ’ ಎಂದು ಸುಪ್ರೀಂಕೋರ್ಟ್‌ ತನ್ನ ತೀರ್ಪಿನಲ್ಲಿ ಹೇಳಿದೆ. ಆದರೆ ವರದಿಯನ್ನು ಸಿಎಜಿ ಸದನದಲ್ಲಿ ಮಂಡಿಸಿದ್ದು ಯಾವಾಗ ಎಂಬುದರ ಕುರಿತು ವಿವರಣೆ ಪಡೆಯಲು ಅಟಾರ್ನಿ ಜನರಲ್‌ (ಎಜಿ) ಹಾಗೂ ಮಹಾಲೇಖಪಾಲರಿಗೆ (ಸಿಎಜಿ) ಸಮನ್ಸ್‌ ನೀಡಬೇಕು ಎಂದು ಎಲ್ಲ ಸದಸ್ಯರಿಗೂ ಕೋರಿಕೆ ಇಡುತ್ತೇನೆ ಎಂದು ಪಿಎಸಿ ಮುಖ್ಯಸ್ಥರೂ ಆಗಿರುವ ಲೋಕಸಭೆಯಲ್ಲಿನ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಸಿಎಜಿ ವರದಿ ಕುರಿತು ಪಿಎಸಿ ಚರ್ಚೆ ಮಾಡಿದ್ದು ಯಾವಾಗ? ಆ ವರದಿಯನ್ನೇ ಮಂಡನೆ ಮಾಡಿಲ್ಲ. ತಪ್ಪು ಮಾಹಿತಿಯನ್ನು ಸರ್ಕಾರ ಸುಪ್ರೀಂಕೋರ್ಟಿಗೆ ನೀಡಿದೆ. ಇದು ನಿಜಕ್ಕೂ ದಿಗ್ಭ್ರಮೆಯ ವಿಷಯ. ಈ ಬಗ್ಗೆ ಸರ್ಕಾರ ಕ್ಷಮೆ ಕೇಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ರಫೇಲ್‌ ಡೀಲ್‌ ಕುರಿತಾದ ಸಿಎಜಿ ವರದಿಯೇ ಸಂಸತ್ತಿನಲ್ಲಿ ಮಂಡನೆಯಾಗಿಲ್ಲ. ಅಲ್ಲದೆ ಆ ವರದಿ ತಾವು ಅಧ್ಯಕ್ಷರಾಗಿರುವ ಪಿಎಸಿಗೂ ಬಂದಿಲ್ಲ ಎಂಬುದು ಖರ್ಗೆ ಅವರ ವಾದವಾಗಿದೆ.

ಜೆಪಿಸಿ ತನಿಖೆಯೇ ಪರಿಹಾರ: ಕಾಂಗ್ರೆಸ್‌

ನವದೆಹಲಿ: ರಫೇಲ್‌ ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದಂತೆ ಶುಕ್ರವಾರ ಸುಪ್ರೀಂಕೋರ್ಟ್‌ ನೀಡಿರುವ ತೀರ್ಪು ಬೆಲೆ ಹಾಗೂ ತಾಂತ್ರಿಕ ಅಂಶಗಳ ಕುರಿತು ಗಮನಹರಿಸಿಲ್ಲ. ಹೀಗಾಗಿ ರಫೇಲ್‌ ಒಪ್ಪಂದದಲ್ಲಿ ಏನಾದರೂ ಹಗರಣ ನಡೆದಿದೆಯೇ ಎಂಬುದರ ಕುರಿತು ಜಂಟಿ ಸಂಸದೀಯ ಸಮಿತಿಯೊಂದು ಮಾತ್ರ ತನಿಖೆ ಮಾಡಬಲ್ಲದು ಎಂದು ಕಾಂಗ್ರೆಸ್‌ ಹೇಳಿದೆ.

ರಫೇಲ್‌ ವಿಮಾನದ ಬೆಲೆಯನ್ನು ಸಂಸತ್ತಿಗೆ ತಿಳಿಸಲಾಗಿಲ್ಲ. ಆದರೆ ಮಹಾಲೇಖಪಾಲರಿಗೆ ಅದರ ಮಾಹಿತಿಯನ್ನು ಕೊಡಲಾಗಿದೆ. ಅದನ್ನು ಸಾರ್ವಜನಿಕ ಲೆಕ್ಕ ಪತ್ರ ಸಮಿತಿಯೂ ಪರಿಶೀಲಿಸಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ. ಆದರೆ ಪಿಎಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಎಂದಿಗೂ ಅಂತಹ ವರದಿಯನ್ನೇ ಸ್ವೀಕರಿಸಿಲ್ಲ. ಇದಕ್ಕೆಲ್ಲಾ ಯಾರು ಹೊಣೆ? ಯಾರು ಇದನ್ನು ಹೇಳಿದ್ದಾರೆ? ಎಂದು ಹಿರಿಯ ನಾಯಕ ಕಪಿಲ್‌ ಸಿಬಲ್‌ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.

Follow Us:
Download App:
  • android
  • ios