ಡಿವೈಎಸ್​​​'ಪಿ ನಿಗೂಢ ಸಾವಿಗೆ ಸಂಬಂಧಿಸಿದಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜಾರ್ಜ್​ಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಡಿವೈಎಸ್ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ದಾಖಲಾತಿಗಳನ್ನು ವಶಕ್ಕೆ ನೀಡುವಂತೆ ಸಿಬಿಐಡಿಗೆ ಸಿಬಿಐ ಪತ್ರ ಬರೆದಿದೆ. ಕೆಲವೇ ದಿನಗಳಲ್ಲಿ ಜಾರ್ಜ್​ ಹಾಗೂ ಇಬ್ಬರು ಐಪಿಎಸ್​​ ಅಧಿಕಾರಿಗಳ ವಿರುದ್ಧ ಎಫ್​​​ಐಆರ್​ ದಾಖಲಾಗುವ ಸಾಧ್ಯತೆ ಇದೆ.

ಬೆಂಗಳೂರು(ಅ.20): ಡಿವೈಎಸ್​​​'ಪಿ ನಿಗೂಢ ಸಾವಿಗೆ ಸಂಬಂಧಿಸಿದಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜಾರ್ಜ್​ಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಡಿವೈಎಸ್ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ದಾಖಲಾತಿಗಳನ್ನು ವಶಕ್ಕೆ ನೀಡುವಂತೆ ಸಿಬಿಐಡಿಗೆ ಸಿಬಿಐ ಪತ್ರ ಬರೆದಿದೆ. ಕೆಲವೇ ದಿನಗಳಲ್ಲಿ ಜಾರ್ಜ್​ ಹಾಗೂ ಇಬ್ಬರು ಐಪಿಎಸ್​​ ಅಧಿಕಾರಿಗಳ ವಿರುದ್ಧ ಎಫ್​​​ಐಆರ್​ ದಾಖಲಾಗುವ ಸಾಧ್ಯತೆ ಇದೆ.

ಸಿಐಡಿ ತನಿಖೆಯಲ್ಲಿ ದೋಷಮುಕ್ತರಾದ ಸಂತರ ನಿರಾಳರಾಗಿದ್ದವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ನಿರೀಕ್ಷೆಯಂತೆ ಸಿಬಿಐ ಎಫ್'ಐಆರ್​​ ದಾಖಲಿಸಿದರೆ ಮೂವರಿಗೂ ಬಂಧನ ಭೀತಿ ಸಹ ಎದುರಾಗಲಿದೆ. ಈ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಪಡೆಯಲು ಸಚಿವರು ಹಾಗೂ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.

ಸುಪ್ರೀಂಕೋರ್ಟ್​​ ಆದೇಶದ ಹಿನ್ನೆಲೆಯಲ್ಲಿ ಸಿಬಿಐ ಈ ಪ್ರಕರಣ ಕೈಗೆತ್ತಿಕೊಂಡಿದೆ. ಜಾರ್ಜ್​ ಸೇರಿ ಮೂವರ ವಿರುದ್ಧ ಆತ್ಮಹತ್ಯೆ ಪ್ರಚೋದನೆ ಆರೋಪದಡಿ ಎಫ್​ಐಆರ್​ ದಾಖಲಿಸಿಕೊಂಡು ಅಧಿಕೃತವಾಗಿ ತನಿಖೆ ನಡೆಸಲಿದೆ.