Asianet Suvarna News Asianet Suvarna News

ಪ್ರವಾಹ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದ ಕೊಡಗು DC ವರ್ಗಾವಣೆ?

ಕೊಡಗಿನಲ್ಲಿ ಭಾರೀ ಮಳೆ ಸುರಿದು ಉಂಟಾದ ಪ್ರವಾಹ ಪರಿಸ್ಥಿತಿ ಸಂದರ್ಭದಲ್ಲಿ  ಪರಿಸ್ಥಿತಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದ ಜಿಲ್ಲಾಧಿಕಾರಿ ಶ್ರೀವಿದ್ಯಾ ಅವರನ್ನು ಸರ್ಕಾರ ವರ್ಗಾವಣೆ ಮಾಡಲಿದೆ ಎನ್ನುವ ವದಂತಿ
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. 

Kodagu DC Transfer Gossip circulated On Social Media
Author
Bengaluru, First Published Sep 10, 2018, 10:22 AM IST | Last Updated Sep 19, 2018, 9:17 AM IST

ಮಡಿಕೇರಿ: ಕೊಡಗಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದ ಸಂದರ್ಭ ಪರಿಸ್ಥಿತಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿ, ಹಗಲಿರುಳು ಎನ್ನದೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದ ಜಿಲ್ಲಾಧಿಕಾರಿ ಶ್ರೀವಿದ್ಯಾ ಅವರನ್ನು ಸರ್ಕಾರ ವರ್ಗಾವಣೆ ಮಾಡಲಿದೆ ಎನ್ನುವ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. 

ಪ್ರಕೃತಿ ವಿಕೋಪದಿಂದಾಗಿ ಮರ ಸಾಗಾಟ, ಮರಳು ಸಾಗಾಣಿಕೆ, ರೆಸಾರ್ಟ್- ಹೋಂಸ್ಟೇನಲ್ಲಿ ಪ್ರವಾಸಿಗರ ನಿರ್ಬಂಧ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡಿದ್ದರು. ಈ ಹಿನ್ನೆಲೆ ಅವರ ಸ್ಥಾನಕ್ಕೆ ಬೇರೆಯ ಅಧಿಕಾರಿಯನ್ನು ನೇಮಿಸುವಂತೆ ಕೆಲವರು ಹುನ್ನಾರ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಕೊಡಗು ಪ್ರವಾಹ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸರ್ಕಾರದಿಂದ ವರ್ಗಾವಣೆಯ ಬಗ್ಗೆ ಈ ವರೆಗೆ ಯಾವುದೇ ಆದೇಶ ಬಂದಿಲ್ಲ. ಆದರೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಶ್ರೀವಿದ್ಯಾ ಫಾರ್ ಕೊಡಗು ಟ್ರೆಂಡ್ ಆರಂಭವಾಗಿದೆ.

Latest Videos
Follow Us:
Download App:
  • android
  • ios