Asianet Suvarna News Asianet Suvarna News

ಕಾಂಗ್ರೆಸ್‌ನ ಕಾಗೋಡು ತಿಮ್ಮಪ್ಪ, ಚಿಂಚನಸೂರ್ ಓಟ್ ಹಾಕಿದ್ದು ಜೆಡಿಎಸ್‌ಗೆ!

ರಾಜ್ಯಸಭೆ ಚುನಾವಣೆಯಲ್ಲಿ ಮತ ಹಾಕುವಾಗ ಯಡವಟ್ಟು ಮಾಡಿಕೊಂಡು ಕಾಂಗ್ರೆಸ್‌ನ ಕಾಗೋಡು ತಿಮ್ಮಪ್ಪ ಮತ್ತು ಬಾಬುರಾವ್ ಚಿಂಚನಸೂರ್ ಜೆಡಿಎಸ್‌ಗೆ ಮತ ಹಾಕಿರಬಹುದು ಎನ್ನಲಾಗಿದೆ.

Kogodu Thimmappa and Baburao Chinchanasuru vote for JDS in Rajyasabha Election

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಮತ ಹಾಕುವಾಗ ಯಡವಟ್ಟು ಮಾಡಿಕೊಂಡು ಕಾಂಗ್ರೆಸ್‌ನ ಕಾಗೋಡು ತಿಮ್ಮಪ್ಪ ಮತ್ತು ಬಾಬುರಾವ್ ಚಿಂಚನಸೂರ್ ಜೆಡಿಎಸ್‌ಗೆ ಮತ ಹಾಕಿರಬಹುದು ಎನ್ನಲಾಗಿದೆ.

ಕಾಂಗ್ರೆಸ್ ಬದಲು ಜೆಡಿಎಸ್‌ಗೆ ಮತ ಹಾಕಿರುವ ಹಿನ್ನೆಲೆಯಲ್ಲಿ ಇವರ ಮತಗಳನ್ನು ಹೇಗೆ ಪರಿಗಣಿಸಲಾಗುವುದು ಎಂಬುದಿನ್ನೂ ಸ್ಪಷ್ಟವಾಗಿಲ್ಲ. ಈ ಎರಡು ಮತಗಳು ತಿರಸ್ಕೃತವಾಗುವ ಸಾಧ್ಯತೆಯೂ ಇದೆ. 

ಈ ಹಿನ್ನೆಲೆಯಲ್ಲಿ ಜೆಡಿಎಸ್ ರೆಬೆಲ್ ಶಾಸಕರಾದ ಚೆಲುವರಾಯಸ್ವಾಮಿ ಹಾಗೂ ಎಚ್.ಸಿ. ಬಾಲಕೃಷ್ಣ ಅವರಿನ್ನೂ ಮತದಾನ ಮಾಡಿಲ್ಲ. ಕಾಂಗ್ರೆಸ್ ಏಜೆಂಟ್ ಪ್ರಕಾರ ಯಾರಿಗೆ ಮತ ಕಡಿಮೆಯಾಗುವುದೇ ಅವರಿಗೇ ಮತ ಹಾಕಿಸುವ ಯೋಚನೆಯಲ್ಲಿ ಕಾಂಗ್ರೆಸ್ ಇದೆ.
 

Follow Us:
Download App:
  • android
  • ios