ಕಾಂಗ್ರೆಸ್ನ ಕಾಗೋಡು ತಿಮ್ಮಪ್ಪ, ಚಿಂಚನಸೂರ್ ಓಟ್ ಹಾಕಿದ್ದು ಜೆಡಿಎಸ್ಗೆ!
ರಾಜ್ಯಸಭೆ ಚುನಾವಣೆಯಲ್ಲಿ ಮತ ಹಾಕುವಾಗ ಯಡವಟ್ಟು ಮಾಡಿಕೊಂಡು ಕಾಂಗ್ರೆಸ್ನ ಕಾಗೋಡು ತಿಮ್ಮಪ್ಪ ಮತ್ತು ಬಾಬುರಾವ್ ಚಿಂಚನಸೂರ್ ಜೆಡಿಎಸ್ಗೆ ಮತ ಹಾಕಿರಬಹುದು ಎನ್ನಲಾಗಿದೆ.
ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಮತ ಹಾಕುವಾಗ ಯಡವಟ್ಟು ಮಾಡಿಕೊಂಡು ಕಾಂಗ್ರೆಸ್ನ ಕಾಗೋಡು ತಿಮ್ಮಪ್ಪ ಮತ್ತು ಬಾಬುರಾವ್ ಚಿಂಚನಸೂರ್ ಜೆಡಿಎಸ್ಗೆ ಮತ ಹಾಕಿರಬಹುದು ಎನ್ನಲಾಗಿದೆ.
ಕಾಂಗ್ರೆಸ್ ಬದಲು ಜೆಡಿಎಸ್ಗೆ ಮತ ಹಾಕಿರುವ ಹಿನ್ನೆಲೆಯಲ್ಲಿ ಇವರ ಮತಗಳನ್ನು ಹೇಗೆ ಪರಿಗಣಿಸಲಾಗುವುದು ಎಂಬುದಿನ್ನೂ ಸ್ಪಷ್ಟವಾಗಿಲ್ಲ. ಈ ಎರಡು ಮತಗಳು ತಿರಸ್ಕೃತವಾಗುವ ಸಾಧ್ಯತೆಯೂ ಇದೆ.
ಈ ಹಿನ್ನೆಲೆಯಲ್ಲಿ ಜೆಡಿಎಸ್ ರೆಬೆಲ್ ಶಾಸಕರಾದ ಚೆಲುವರಾಯಸ್ವಾಮಿ ಹಾಗೂ ಎಚ್.ಸಿ. ಬಾಲಕೃಷ್ಣ ಅವರಿನ್ನೂ ಮತದಾನ ಮಾಡಿಲ್ಲ. ಕಾಂಗ್ರೆಸ್ ಏಜೆಂಟ್ ಪ್ರಕಾರ ಯಾರಿಗೆ ಮತ ಕಡಿಮೆಯಾಗುವುದೇ ಅವರಿಗೇ ಮತ ಹಾಕಿಸುವ ಯೋಚನೆಯಲ್ಲಿ ಕಾಂಗ್ರೆಸ್ ಇದೆ.