ಡರ್ಟಿ ಡೈರಿ ಪುರಾಣದ ನಡುವೆ ನಾಳೆ ರಾಜ್ಯ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆ ನಡೆಯಲಿದೆ. ಸಭೆಯಲ್ಲಿ ಸಂಪುಟ ಪುನಾರಚನೆಗೆ ಮನವಿ ಮಾಡಲು ಕೆಪಿಸಿಸಿ ತೀರ್ಮಾನಿಸಿದೆ.

ಬೆಂಗಳೂರು(ಫೆ.25): ಡರ್ಟಿ ಡೈರಿ ಪುರಾಣದ ನಡುವೆ ನಾಳೆ ರಾಜ್ಯ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆ ನಡೆಯಲಿದೆ. ಸಭೆಯಲ್ಲಿ ಸಂಪುಟ ಪುನಾರಚನೆಗೆ ಮನವಿ ಮಾಡಲು ಕೆಪಿಸಿಸಿ ತೀರ್ಮಾನಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಮನ್ವಯ ಸಮಿತಿ ಸಭೆಯಲ್ಲಿ ‌ಚರ್ಚಿಸಬಹುದಾದ ವಿಷಯಗಳ ಪಟ್ಟಿಯಲ್ಲಿ 4 ವರ್ಷ ಪೂರೈಸಿದ‌ ಸಚಿವರ ಬದಲಾವಣೆಯೇ ಮೊದಲ ವಿಷಯ. ಸರ್ಕಾರದಲ್ಲಿ 4 ವರ್ಷ ಪೂರೈಸಿದ ಸಚಿವರ ಬದಲಾಯಿಸಿ ಹೊಸ‌ ಮುಖಗಳಿಗೆ ಅವಕಾಶ ನೀಡುವ ವಿಚಾರವೇ ಚರ್ಚೆಯ ಮೊದಲ ವಿಚಾರ.

ಸಮನ್ವಯ ಸಮಿತಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಹಾಗೂ ಸಮಿತಿಯ ಎಲ್ಲ ಸದಸ್ಯರು ಒಪ್ಪಿದರೆ‌ ಮಾತ್ರ 4 ವರ್ಷ ಪೂರೈಸಿದ ಸಚಿವರಿಗೆ ಗೇಟ್ ಪಾಸ್ ನೀಡಲು ತೀರ್ಮಾನಿಸಲಾಗುತ್ತದೆ. 4 ವರ್ಷ ಪೂರೈಸಿದ ಸಚಿವರನ್ನು ಬದಲಾಯಿಸಿ ಪಕ್ಷದ ಜವಾಬ್ದಾರಿ ನೀಡುವ ವಿಚಾರವೂ ಚರ್ಚೆಗೆ ಬರಲಿದೆ.

ಇನ್ನು, 15 ವಿಧಾನಸಭಾ ಕ್ಷೇತ್ರಗಳ‌ ಸಂಘಟನಾ ಜವಾಬ್ದಾರಿ ನೀಡುವ ಬಗ್ಗೆ ಚರ್ಚಿಸಲು ಕೆಪಿಸಿಸಿ ವತಿಯಿಂದ ಚರ್ಚೆಗೆ ಶಿಫಾರಸು ಮಾಡಲಾಗಿದೆ. ಈ ವಿಷಯಗಳ ಕುರಿತ ಕೆಪಿಸಿಸಿ ಪತ್ರ ಸುವರ್ಣ ನ್ಯೂಸ್ ಗೆ ಲಭ್ಯವಾಗಿದೆ.