ವಿಜಯಪುರದಿಂದ ಹುಬ್ಬಳ್ಳಿ ಮಾರ್ಗವಾಗಿ ಬರುತ್ತಿದ್ದ ಕೆಎಸ್'ಆರ್'ಟಿಸಿ ಬಸ್'ಗೆ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಕೊರ್ತಿ ಕ್ರಾಸ್ ಬಳಿ ಕ್ರೂಸರ್'ಗೆ ಡಿಕ್ಕಿಯಾಗಿದೆ.

ಬಾಗಲಕೋಟೆ(ಸೆ.08): ಇಂದಯ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು ಕೆಎಸ್'ಆರ್'ಟಿಸಿ ಬಸ್ ಹಾಗೂ ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಎರಡು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿಜಯಪುರದಿಂದ ಹುಬ್ಬಳ್ಳಿ ಮಾರ್ಗವಾಗಿ ಬರುತ್ತಿದ್ದ ಕೆಎಸ್'ಆರ್'ಟಿಸಿ ಬಸ್'ಗೆ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಕೊರ್ತಿ ಕ್ರಾಸ್ ಬಳಿ ಕ್ರೂಸರ್'ಗೆ ಡಿಕ್ಕಿಯಾಗಿದೆ. ಈ ವೇಳೆ ಕ್ರೂಸರ್'ನಲ್ಲಿದ್ದ 6 ಮಂದಿಯು ಸ್ಥಳದಲದಲ್ಲಿಯೇ ಮೃತಪಟ್ಟಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವವರನ್ನು ಬೀಳಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಸ್ಥಳಕ್ಕೆ ಬೀಳಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.